ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಸರ್ಕಾರಿ ಕಾಲೇಜುಗಳಲ್ಲಿ ಐಚ್ಛಿಕ ವಿಷಯವಾಗಿಕಂಪ್ಯೂಟರ್ ಶಿಕ್ಷಣ
ಬೆಂಗಳೂರು : ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯದ ಎಲ್ಲ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಂಪ್ಯೂಟರ್ ಸಾಯನ್ಸ್ ನ್ನು ಐಚ್ಛಿಕ ವಿಷಯವನ್ನಾಗಿ ಆಳವಡಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಅವರು ಮಾಗಡಿ ತಾಲ್ಲೂಕಿನ ಸತ್ಯನಾರಾಯಣ ಶೆಟ್ಟಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡುತ್ತಿದ್ದರು. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಕಲಿಕೆಗೆ ಅವಕಾಶ ಒದಗಿಸುವ ದೃಷ್ಠಿಯಿಂದ ಎಲ್ಲ ಸರಕಾರಿ ಕಾಲೇಜಿನ ಪದವಿ ತರಗತಿಗಳಲ್ಲಿ ಕಂಪ್ಯೂಟರ್ ವಿಷಯವನ್ನು ಅಳವಡಿಸಲು ನಿರ್ಧರಿಸಲಾಗಿದೆ ಎಂದ ಸಚಿವರು, ಪ್ರೌಢ ಶಾಲೆಗಳಲ್ಲಿಯೂ ಕಂಪ್ಯೂಟರ್ ಶಿಕ್ಷಣವನ್ನು ಜಾರಿಗೆ ತರಲಾಗಿದೆ ಎಂದು ಹೇಳಿದರು.
(ಇನ್ಫೋ ವಾರ್ತೆ)
Comments
Story first published: Tuesday, March 13, 2001, 5:30 [IST]