ನೀರಾ: ಅರಸಿಕೆರೆಯಲ್ಲಿ ಅಬ್ಕಾರಿಕಾರ್ಯಾಚರಣೆ ವಿರೋಧಿಸಿ ರೈತರ ಪ್ರತಿಭಟನೆ
ಹಾಸನ : ಅರಸೀಕೆರೆ ತಾಲ್ಲೂಕಿನ ಕೋಡಿ ಹಳ್ಳಿ, ಪುರಲೇ ಹಳ್ಳಿ ಮತ್ತು ಹರಪ್ಪನ ಹಳ್ಳಿಯ ತೆಂಗಿನ ತೋಟಗಳಲ್ಲಿ ಇಳಿಸುತ್ತಿದ್ದ ನೀರಾ(ಸೇಂದಿ)ಯನ್ನು ನಾಶ ಮಾಡಲು ಅಬಕಾರಿ ಇಲಾಖೆಯವರು ಬುಧವಾರ ದಾಳಿ ನಡೆಸಿದ್ದು ರೈತರು ಪ್ರತಿಭಟಿಸಿದಾಗ ನಡೆದ ಘರ್ಷಣೆಯಲ್ಲಿ ಪೊಲೀಸರು ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ.
ಸುಮಾರು 30ಕ್ಕೂ ಹೆಚ್ಚು ವಾಹನಗಳಲ್ಲಿ ಅಬ್ಕಾರಿ ಇಲಾಖೆ ಸಿಬ್ಬಂದಿ ಏಕಾಏಕಿ ತೆಂಗಿನ ತೋಟಗಳಿಗೆ ನುಗ್ಗಿ ದಾಳಿ ಮಾಡಿದರು. ಈ ಸಂದರ್ಭದಲ್ಲಿ ನೀರಾ ಇಳಿಸಲು ಮರಗಳ ಮೇಲೆ ಏರಿದ್ದ ರೈತರು ತಕ್ಷಣವೇ ಕೆಳಗೆ ಬಿದ್ದು ಸಾಯುವುದಾಗಿ ಬೆದರಿಸಿದಾಗ ಪೊಲೀಸರು ಅವರ ಮನವೊಲಿಸಿ ಕೆಳಗಿಳಿಯುವಂತೆ ಮಾಡಿ ನಂತರ ಒಟ್ಟು 127 ಮಂದಿ ರೈತರನ್ನು ಬಂಧಿಸಿದರು.
ರೈತರನ್ನು ಬಂಧನದ ನಂತರ ಮತ್ತೆ ಪುರಲೇ ಹಳ್ಳಿ ಮತ್ತು ಹರಪ್ಪನ ಹಳ್ಳಿಗಳಿಗೆ ತೆರಳಿದ ಪೊಲೀಸರು ನೀರಾ ವಿರುದ್ಧ ಕಾರ್ಯಾಚರಣೆಯನ್ನು ಮುಂದುವರೆಸಿದಾಗ ಅಲ್ಲಿನ ರೈತರು ಮತ್ತು ಮಹಿಳೆಯರು ರೊಚ್ಚಿಗೆದ್ದು ಕಲ್ಲು ತೂರಾಟ ಆರಂಭಿಸಿದರು. ಪರಿಸ್ಥಿತಿಯ ನಿಯಂತ್ರಣಕ್ಕೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದು, ಘಟನೆಯಲ್ಲಿ ದೇವರಾಜ, ಸುಬ್ಬಣ್ಣ, ಸಾವಿತ್ರಮ್ಮ, ರಾಜಮ್ಮ, ಗೌರಮ್ಮ, ತಿಮ್ಮೇಗೌಡ, ಅಶೋಕ ಮತ್ತು ವೆಂಕಟಪ್ಪ ಎಂಬ ರೈತರು ಗಾಯಗೊಂಡು ಅರಸಿಕೆರೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬಂಧಿಸಿದ್ದ ರೈತರನ್ನು ಬಿಡುಗಡೆ ಮಾಡಿದ ತಕ್ಷಣ ತಮ್ಮ ಹಳ್ಳಿಯಲ್ಲಿ ನಡೆದ ಘಟನೆಯನ್ನು ಪ್ರತಿಭಟಿಸಿ ರೈತರು ತಾಲ್ಲೂಕು ಕಚೇರಿ ಮುಂದೆ ಧರಣಿ ನಡೆಸಿದ್ದರು. ಕೋಡಿ ಹಳ್ಳಿ, ಪುರಲೇ ಹಳ್ಳಿ ಮತ್ತು ಹರಪ್ಪನ ಹಳ್ಳಿಯ ಸುತ್ತ ಮುತ್ತ ಬಿಗುವಿನ ವಾತಾವರಣ ಇದ್ದು, ಬಿಗಿ ಪೊಲೀಸ್ ಪಹರೆ ನೆಮಿಸಲಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications