ಚಿಕ್ಕಮಗಳೂರು : ರಥ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ ವೃದ್ಧ
ಚಿಕ್ಕಮಗಳೂರು : ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ದೊಡ್ಡ ಬೆಟ್ಟ ಶ್ರೇಣಿಯ ಸೀತಾಳಯ್ಯನ ಗಿರಿ ಮಠದಲ್ಲಿ ಮಂಗಳವಾರ (ಮಾ.13) ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವದಲ್ಲಿ ರಥದ ಚಕ್ರಕ್ಕೆ ಸಿಲುಕಿ ಉಳುವಾಗಿಲಿನ ದೇವೇಗೌಡ ಎಂಬ 75 ವರ್ಷದ ವೃದ್ಧರೊಬ್ಬರು ಮೃತಪಟ್ಟ ದುರ್ಘಟನೆ ಸಂಭವಿಸಿದೆ.
ಪ್ರತಿವರ್ಷದಂತೆಯೇ ಈ ವರ್ಷವೂ ಮಠದಲ್ಲಿ ಮಧ್ಯಾಹ್ನ ರಥೋತ್ಸವ ಏರ್ಪಡಿಸಲಾಗಿತ್ತು. ಸಾವಿರಾರು ಜನ ಸೇರಿದ್ದರು. ಭಕ್ತರು ಶ್ರದ್ಧಾಭಕ್ತಿಯಿಂದ ರಥ ಎಳೆಯುತ್ತಿದ್ದಾಗ ಮುಂಭಾಗದಲ್ಲಿದ್ದ ದೇವೇಗೌಡರು ಜಾರಿಬಿದ್ದು ರಥ ಚಕ್ರಕ್ಕೆ ಸಿಲುಕಿದರು.
ಕೂಡಲೇ ರಥವನ್ನು ಮುಂದಕ್ಕೆ ಎಳೆಯುವುದನ್ನು ನಿಲ್ಲಿಸಲಾಯಿತಾದರೂ ವೃದ್ಧರು ಬದುಕುಳಿಯಲಿಲ್ಲ. ಸುದ್ದಿ ತಿಳಿದ ಕೂಡಲೇ ಜಿಲ್ಲಾಧಿಕಾರಿ ಗೋಪಾಲಕೃಷ್ಣ ಗೌಡ ಅವರು, ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ರಥ ದುರಂತಗಳು : ನಂಜನಗೂಡಿನ ರಥಚಕ್ರಕ್ಕೆ ಸಿಲುಕಿ ಒಬ್ಬ ಭಕ್ತ ಮೃತಪಟ್ಟು, ಮತ್ತೊಬ್ಬರ ಕಾಲು ತುಂಡಾದ ಘಟನೆ ನಡೆದು ವರ್ಷಗಳೇ ಉಳಿದರೂ ಜನಮಾನಸದಿಂದ ಇನ್ನೂ ಮರೆಯಾಗುತ್ತಿಲ್ಲ. ಹೋದವರ್ಷ ಏಪ್ರಿಲ್ 20ರಂದು ಗೋಕಾಕ ಬಳಿಯ ಮರಡಿಮಠದಲ್ಲಿ ನಡೆದ ಕಾಡಸಿದ್ದೇಶ್ವರ ಜಾತ್ರೆಯಲ್ಲಿ ಜಾತ್ರಾ ಕಮಿಟಿ ಸದಸ್ಯರೇ ರಥ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದರು.
ಮತ್ತೆ ಮೇ ತಿಂಗಳಿನಲ್ಲಿ ಬೆಳಗಾವಿ ತಾಲೂಕಿನ ಮಂಡೋಳಿಯಲ್ಲಿ ನಡೆದ ಮಹಾಲಕ್ಷ್ಮೀ ದೇವಿ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವೃದ್ಧರೋಬ್ಬರು ಅಸುನೀಗಿದ್ದರು. ಈ ಎಲ್ಲ ದುರ್ಘಟನೆಗಳ ಸಾಲಿನಲ್ಲಿ ಚಿಕ್ಕಮಗಳೂರು ಮುಳ್ಳಯ್ಯನಗಿರಿ ಶ್ರೇಣಿಯ ಸೀತಾಳಯ್ಯನ ಗಿರಿ ಮಠದ ರಥೋತ್ಸವವೂ ಸೇರಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications