ಚೆನ್ನೈ ಟೆಸ್ಟ್ ತಂಡ
ಕೋಲ್ಕತ : ಶ್ರೀನಾಥ್ ಪುನರಾಗಮನ. ವೆಂಕಿಗೆ ಕೊಕ್. ವೆಂಕಟಪತಿ ರಾಜು ಮನೆಗೆ. ನೆಹ್ರ ಬದಲಿಗೆ ಸಾಯಿರಾಜ್ ಬಹುತುಲೆ. ರಾಜು ಜಾಗೆಗೆ ನೀಲೇಶ್ ಕುಲಕರ್ಣಿ. ಆಸ್ಟ್ರೇಲಿಯಾ ವಿರುದ್ಧ ಚೆನ್ನೈನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಕ್ರಿಕೆಟ್ಗೆ ಆಯ್ಕೆ ಮಂಡಳಿ ಗುರುವಾರ ಪ್ರಕಟಿಸಿರುವ ತಂಡದಲ್ಲಿ ಆಗಿರುವ ಸ್ವಾಗತಾರ್ಹ ಬದಲಾವಣೆಗಳಿವು.
ಗುರುವಾರ ಭಾರತ ಆ್ಯಸೀಸ್ ವಿರುದ್ಧ 171 ರನ್ಗಳ ರೋಮಾಂಚಕ ವಿಜಯ ದಾಖಲಿಸಿದ ನಂತರ ಬಿಸಿಸಿಐ ಕಾರ್ಯದರ್ಶಿ ಜಯವಂತ ಲೆಲೆ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಮೊನ್ನೆ ರಣಜಿ ಪಂದ್ಯದಲ್ಲೂ ಮಿಂಚಿರುವ ಕರ್ನಾಟಕದ ಆಲ್ರೌಂಡರ್ ಜೋಷಿ ಮಾತ್ರ ಇನ್ನೂ ಆಯ್ಕೆದಾರರ ಗಮನಕ್ಕೆ ಬಾರದಿರುವುದು ವಿಷಾದದ ಸಂಗತಿ. ವೆಂಕಟಪತಿ ರಾಜು ಅವರನ್ನು ಮನೆಗೆ ಕಳುಹಿಸಿದ್ದು ಸ್ವಾಗತಾರ್ಹ. ಅಂತೆಯೇ ಲೆಗ್ ಸ್ಪಿನ್ನರ್ ಸಾಯಿರಾಜ್ ಬಹುತುಲೆಗೆ ಅವಕಾಶ ಕೊಟ್ಟಿರುವುದೂ ಆಯ್ಕೆಯಲ್ಲಿನ ಉತ್ತಮ ಬದಲಾವಣೆ. 2ನೇ ಟೆಸ್ಟ್ನಲ್ಲಿ ಕಳಪೆ ಪ್ರದರ್ಶನ ನೀಡಿದ ವಿಕೆಟ್ ಕೀಪರ್ ಮೊಂಗಿಯಾರನ್ನು ಮನೆಗೆ ಕಳುಹಿಸಿ, ವಿಜಯ್ ದಾಹಿಯಾ ಅವರನ್ನು ಆಯ್ಕೆ ಮಾಡಿದ್ದರೆ ಅದೊಂದು ಉತ್ತಮ ಆಯ್ಕೆಯಾಗುತ್ತಿತ್ತು.
ಹದಿನಾಲ್ಕು ಮಂದಿಯ ತಂಡ ಇಂತಿದೆ- ಸೌರವ್ ಗಂಗೂಲಿ (ನಾಯಕ), ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್, ಶಿವಸುಂದರ್ ದಾಸ್, ಶಡಗೋಪನ್ ರಮೇಶ್, ನಯನ್ ಮೊಂಗಿಯಾ (ವಿಕೆಟ್ ಕೀಪರ್), ಜಾವಗಲ್ ಶ್ರೀನಾಥ್, ಜಹೀರ್ ಖಾನ್, ಹರ್ಭಜನ್ ಸಿಂಗ್, ಸಾಯಿರಾಜ್ ಬಹುತುಲೆ, ನೀಲೇಶ್ ಕುಲಕರ್ಣಿ, ಹೇಮಾಂಗ್ ಬದಾನಿ ಮತ್ತು ಶರಣ್ದೀಪ್ ಸಿಂಗ್.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications