ಮೋಡದ ಮರೆಯಲ್ಲಿ ಏರಿದ ಧಗೆ
ಬೆಂಗಳೂರು : ಬೆಂಗಳೂರಿನಲ್ಲಿ ಬುಧವಾರ ಸಂಜೆ ಮೋಡ ಮುಸುಕಿತು. ಮನೆಯ ಮುಂದೆ ನೀರು ಚುಮುಕಿಸುವಂತೆ ಒಂದು ಅಥವಾ ಎರಡು ಹನಿ ಮಳೆಯೂ ಬಿತ್ತು. ಬೆಳಗ್ಗಿನಿಂದಲೂ ಮೋಡಗಳ ಮರೆಯಲ್ಲೇ ಸುಡುತ್ತಿದ್ದ ಸೂರ್ಯನಿಂದ ಚೆನ್ನಾಗಿ ಕಾದಿದ್ದ ಭೂಮಿಯ ಮೇಲೆ ಬಿದ್ದ ಮಳೆಯಿಂದ ಧಗೆ ಹೆಚ್ಚಿತ್ತು.
ಕಳೆದ ಒಂದೆರಡು ದಿನದಿಂದ ರಾಜ್ಯದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಗುರವಾಗಿ ಬಿದ್ದ ಮಳೆಗೆ ಬುಧವಾರ ವಿಶ್ರಾಂತಿ. ಈ ಮಧ್ಯೆ ರಾಜ್ಯದಲ್ಲಿ ಒಣಹವೆ ಮುಂದುವರಿದಿತ್ತು. ಕರಾವಳಿ, ಉತ್ತರ ಒಳನಾಡಿನದಲ್ಲಿ ಗರಿಷ್ಠ ತಾಪಮಾನದಲ್ಲಿ ಅಲ್ಪಬದಲಾವಣೆ ಆಗಿತ್ತು. ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನ ಸಾಮಾನ್ಯ ಮಟ್ಟದಲ್ಲಿತ್ತು.
ಕನಿಷ್ಠ ತಾಪಮಾನದಲ್ಲೂ ಬದಲಾವಣೆ ಆಗಿದ್ದು, ಕರಾವಳಿಯ ಕೆಲವೆಡೆ ಅದು, ಸಾಮಾನ್ಯಮಟ್ಟಕ್ಕಿಂತ ಕಡಿಮೆ ಇತ್ತು. ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ರಾಜ್ಯದ ಅತಿ ಹೆಚ್ಚು ತಾಪಮಾನ 38.3 ಡಿಗ್ರಿ ಸೆಲ್ಸಿಯಸ್ ರಾಯಚೂರಿನಲ್ಲೂ, ಅತಿ ಕಡಿಮೆ ತಾಪಮಾನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ (12.8) ದಾಖಲಾಗಿದೆ.
ಮುನ್ಸೂಚನೆಯಂತೆ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ. ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡವಿದ್ದು ಹಗಲಿನ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಹಾಗೂ ರಾತ್ರಿಯ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications