ಕಂಪನದ ಕಪ್ಪು ಪರದೆಯ ಮುಂದೆ ಎಐಸಿಸಿಯನಿರಾಡಂಬರ ಅಧಿವೇಶನ
ಬೆಂಗಳೂರು : ಶನಿವಾರ ಪ್ರಾರಂಭವಾಗಲಿರುವ 81ನೇ ಅಖಿಲ ಭಾರತ ಕಾಂಗ್ರೆಸ್ ಪೂರ್ಣಾಧಿವೇಶನ ಅಬ್ಬರ- ಆಡಂಬರಗಳಿಲ್ಲದೆ ಸರಳವಾಗಿ ನಡೆಯಲಿದೆ. ಸೋನಿಯಾ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾದ ನಂತರ ನಡೆಯುತ್ತಿರುವ ಮೊದಲ ಅಧಿವೇಶನ ಇದಾಗಿದ್ದು, ಗಣ ರಾಜ್ಯೋತ್ಸವದಂದು ಗುಜರಾತ್ನಲ್ಲಿ ಸಂಭವಿಸಿದ ಭೂಕಂಪದ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ನಿರ್ಧರಿಸಲಾಗಿದೆ.
ನಗರದ ಅರಮನೆ ಆವರಣದಲ್ಲಿ ಅರಮನೆಯನ್ನೇ ನೆನಪಿಸುವ ತಾತ್ಕಾಲಿಕ ಗೋಡೆಗಳನ್ನು, ಬೃಹತ್ ವೇದಿಕೆಯನ್ನು ಕಟ್ಟಿ ಕಳೆಗಟ್ಟಿಸಿ, ಅದಕ್ಕೆ ರಾಜೀವ್ಗಾಂಧಿ ನಗರ ಎಂದು ನಾಮಕರಣ ಮಾಡಲಾಗಿದೆ. ಆದರೆ ಈ ಬಾರಿಯ ಪೂರ್ಣಾಧಿವೇಶನದಲ್ಲಿ ಕಾಂಗ್ರೆಸ್ ಅಧ್ಯಕ್ಷರನ್ನು ಮೆರವಣಿಗೆ ಮಾಡುವ ಸಂಪ್ರದಾಯವನ್ನೂ ಕೈಬಿಡಲಾಗಿದೆ. ಅಷ್ಟೇ ಅಲ್ಲ , ನಗರದ ತುಂಬಾ ತೂಗಾಡಬೇಕಿದ್ದ ಕಾಂಗ್ರೆಸ್ ಧುರೀಣರ ಬ್ಯಾನರ್ಗಳ ಸಂಖ್ಯೆಯಲ್ಲೂ ಇಳಿಮುಖ ಕಂಡುಬಂದಿದೆ.
ಫೆಬ್ರವರಿಯಲ್ಲೇ ನಡೆಯಬೇಕಾಗಿದ್ದ ಅಧಿವೇಶನವನ್ನು ಭಯಾನಕ ಭೂಕಂಪ ಸಂಭವಿಸಿದ ಹಿನ್ನೆಲೆಯಲ್ಲಿ ಮಾರ್ಚಿಗೆ ಮುಂದೂಡಿದ್ದನ್ನು ಇಲ್ಲಿ ಸ್ಮರಿಸಬಹುದು. ದೇಶ ಕಂಡ ದೊಡ್ಡ ದುರಂತದ ಛಾಯೆ ಇನ್ನೂ ಮಾಸಿಲ್ಲದ ಕಾರಣ ಅತಿಯಾದ ಆಚರಣೆ ಕೂಡದೆಂದು ಕಾಂಗ್ರೆಸ್ ತೀರ್ಮಾನಿಸಿದೆ. ಸಾಮಾನ್ಯವಾಗಿ ಫೋರ್ ಸ್ಟಾರ್ ಅಥವಾ ಫೈವ್ ಸ್ಟಾರ್ ಹೊಟೇಲುಗಳಲ್ಲೇ ನಾಯಕರಿಗೆ ತಂಗಲು ವ್ಯವಸ್ಥೆ ಮಾಡಲಾಗುತ್ತಿತ್ತು. ಆದರೆ ಈ ಬಾರಿ ಪಕ್ಷ ವಸತಿ ವ್ಯವಸ್ಥೆಗೆ ಅಷ್ಟೊಂದು ಹಣ ಖರ್ಚು ಮಾಡದೆ, ಸುಮಾರಾದ ಹೊಟೇಲುಗಳಲ್ಲೇ ವಸತಿ ವ್ಯವಸ್ಥೆ ಮಾಡಿದೆ.
ಅಧಿವೇಶನದ ಸಿದ್ಧತೆಯಲ್ಲಿ ಮುಳುಗಿ ಹೋಗಿರುವ ಪಕ್ಷದ ಕಾರ್ಯಕರ್ತರು ಯುಎನ್ಐ ವರದಿಗಾರರಿಗೆ ಈ ವಿಷಯಗಳನ್ನು ವಿವರಿಸಿದ್ದಾರೆ. ಅಧಿವೇಶನದಲ್ಲಿ ಭಾರೀ ಭೋಜನ ಇರುವುದಿಲ್ಲವಂತೆ. ಅದರಲ್ಲೂ ಸರಳತೆ ಕಾಯ್ದುಕೊಳ್ಳುವುದಾಗಿ ಕಾರ್ಯಕರ್ತರು ಹೇಳಿದ್ದಾರೆ.
(ಯುಎನ್ಐ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications