ಎನ್ಡಿಎ ಸರ್ಕಾರ ಈಗಲೋ ಆಗಲೋ- ಕಾಂಗ್ರೆಸ್ ಕ್ಷಣಗಣನೆ
ಬೆಂಗಳೂರು : ರಾಜಕೀಯದಲ್ಲಿ ಆಗಿರುವ ತೆಹಲ್ಕಾದಲ್ಲಿ ಅಲ್ಲಾಡುತ್ತಿರುವ ಎನ್ಡಿಎ, ಗದ್ದುಗೆಯಿಂದ ಇನ್ನು ಎರಡೇ ದಿನಗಳಲ್ಲಿ ಕುಸಿಯಲಿದೆ ಎಂದು ಕಾಂಗ್ರೆಸ್ ಈಗಾಗಲೇ ಕ್ಷಣಗಣನೆ ಮಾಡುತ್ತಿದೆ.
ತೆಹಲ್ಕಾ ಡಾಟ್ಕಾಂ 8 ತಿಂಗಳು ಜಾಲಾಡಿ, ಬಯಲಿಗೆ ತಂದಿರುವ ರಕ್ಷಣಾ ಅವ್ಯವಹಾರಗಳ ಹಿನ್ನೆಲೆಯಲ್ಲಿ ಎನ್ಡಿಎ ಸರ್ಕಾರ ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪೂರ್ಣಾಧಿವೇಶನ ಮುಗಿಯುವ ಮುನ್ನ, ಅಂದರೆ ಮಾರ್ಚ್ 18ಕ್ಕೆ ಮುಂಚೆಯೇ ಉರುಳಿಬಿದ್ದರೂ ಆಶ್ಚರ್ಯವೇನಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಆಜಾದ್ ಹೇಳಿದ್ದಾರೆ.
ಅಟಲ್ ಬಿಹಾರಿ ವಾಜಪೇಯಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಗದ್ದುಗೆ ಬಿಟ್ಟು ಕೆಳಗಿಯುವುದು ಬಿಟ್ಟು ಬೇರೆ ದಾರಿ ಇಲ್ಲ. ರಕ್ಷಣಾ ಸಚಿವ ಜಾರ್ಜ್ ಫರ್ನಾಂಡಿಸ್ ರಾಜೀನಾಮೆ ಕೊಟ್ಟದ್ದು ಸಾರ್ವಜನಿಕರ, ಮಾಧ್ಯಮಗಳ ಹಾಗೂ ರಾಜಕಾರಣಿಗಳ ಒತ್ತಡದಿಂದ. ಎನ್ಡಿಎ ಸರ್ಕಾರಕ್ಕೂ ಫರ್ನಾಂಡಿಸ್ಗೆ ಒದಗಿದ ಗತಿಯೇ ಆಗಲಿದೆ. ಅದು ಇನ್ನೆರಡೇ ದಿನಗಳಲ್ಲಿ ಉರುಳಿದರೂ ಯಾವುದೇ ಆಶ್ಚರ್ಯವಿಲ್ಲ ಎಂದು ಆಜಾದ್, ಟಿವಿ ಚಾನೆಲ್ಗಳಿಗೆ ತಿಳಿಸಿದರು.
ಭ್ರಷ್ಟ ಸರ್ಕಾರವನ್ನು ಹಿಂದೂಮುಂದೂ ನೋಡದೆ ಧಿಕ್ಕರಿಸಿ ಹೊರ ನಡೆದ ತೃಣಮೂಲ ಕಾಂಗ್ರೆಸ್ನ ಮಮತಾ ಬ್ಯಾನರ್ಜಿಯವರನ್ನು ಮೆಚ್ಚಬೇಕು. ಶುಕ್ರವಾರ ರಾತ್ರಿ ನಡೆಯಲಿರುವ ಸಭೆಯಲ್ಲಿ ಈ ರಾಜಕೀಯ ಬೆಳವಣಿಗೆಗಳೇ ಚರ್ಚೆಯ ವಸ್ತುವಾಗುತ್ತದಾದರೂ, ಪಕ್ಷ ಅಂದುಕೊಂಡಿರುವ ಕೃಷಿ, ವಿದೇಶಾಂಗ ನೀತಿ ಮತ್ತಿತರ ಪ್ರಮುಖ ವಿಷಯ ಕುರಿತ ಗೊತ್ತುವಳಿಗಳಿಗೆ ಅಂತಿಮ ರೂಪು ದೊರೆಯಲಿದೆ ಎಂದರು.
ನೈತಿಕ ಹೊಣೆ ಹೊತ್ತು ಕೆಳಗಿಳಿಯಲಿ : ಕರ್ನಾಟಕದ ಕಾಂಗ್ರೆಸ್ ಧುರೀಣ ಟಿ.ಎನ್.ನರಸಿಂಹ ಮೂರ್ತಿ ಮಾತನಾಡಿ, ನೈತಿಕ ಹೊಣೆ ಹೊತ್ತು ಎನ್ಡಿಎ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲೇಬೇಕು. ಲೋಕಸಭೆಗೆ ಹೊಸ ಚುನಾವಣೆ ನಡೆಸಲು ಅನುವು ಮಾಡಿಕೊಡಬೇಕು ಎಂದು ಆಗ್ರಹಿಸಿದರು. ಎನ್ಡಿಎಯಿಂದ ಹೊರಬಂದ ಮಮತಾ ಬ್ಯಾನರ್ಜಿಯವರಿಗೆ ಅವರು ಧನ್ಯವಾದಗಳನ್ನೂ ಅರ್ಪಿಸಿದರು.
(ಯುಎನ್ಐ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications