ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಿಟ್ಟೂರು ಶ್ರೀನಿವಾಸರಾಯರಿಗೆ ‘ಯುಗಪುರುಷ’ ಪ್ರಶಸ್ತಿ ಪ್ರದಾನ
ಬೆಂಗಳೂರು : ನೂರರ ಹೊಸ್ತಿಲಲ್ಲಿರುವ ನಿಷ್ಠುರ ನ್ಯಾಯವ್ಯಾದಿ ಹಾಗೂ ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ನಿಟ್ಟೂರು ಶ್ರೀನಿವಾಸರಾಯರಿಗೆ ಬುಧವಾರ ಬೆಂಗಳೂರಿನಲ್ಲಿ ಯುಗಪುರುಷ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.
ಸಾಹಿತ್ಯ, ಸಂಸ್ಕೃತಿ, ಸಮಾಜಸೇವೆ, ನ್ಯಾಯ, ಶೈಕ್ಷಣಿಕ ಹೀಗೆ ಸಮಾಜದ ಹಲವು ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸುತ್ತಿರುವ ಶ್ರೀನಿವಾಸರಾಯರನ್ನು ಪತ್ರಿಕಾ, ಸಾಹಿತ್ಯ ಮತ್ತು ವಿಚಾರವಂತರ ವೇದಿಕೆ ನಗರದ ಏಟ್ರಿಯಾ ಹೊಟೆಲ್ನಲ್ಲಿ ಗೌರವಿಸಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ನ್ಯಾಯಮೂರ್ತಿಗಳಾದ ವಿ.ಎಸ್. ಮಳೀಮಠ್ ನಿಟ್ಟೂರು ಶ್ರೀನಿವಾಸರಾಯರಿಗೆ ಮೈಸೂರು ಪೇಟ ತೊಡಿಸಿ, ನ್ಯಾಯದೇವತೆಯ ಪ್ರತಿಮೆಯನ್ನು ನೀಡಿ ಗೌರವಿಸಿದರು. ವಿಧಾನ ಪರಿಷತ್ ಸದಸ್ಯ ಸಿ. ನಾರಾಯಣರೆಡ್ಡಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಸಿ. ಸೋಮಶೇಖರ್ ಮೊದಲಾದವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
Comments
Story first published: Friday, March 16, 2001, 5:30 [IST]