ಸುಳ್ಳು ಆರೋಪಗಳನ್ನು ಮಾಡುವುದು ಅಪರಾಧ - ವಾಜಪೇಯಿ
ನವದೆಹಲಿ : ಸುಳ್ಳು ಆರೋಪಗಳನ್ನು ಮಾಡುವುದು ಅಪರಾಧ. ಅದಕ್ಕೆ ಕಿವಿ ಕೊಡುವುದು ಕೂಡ ಅಷ್ಟೇ ಅಪರಾಧ ಎಂದು ಪ್ರಧಾನಿ ವಾಜಪೇಯಿ ಹೇಳಿದ್ದಾರೆ.
ಶುಕ್ರವಾರ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ವಾಜಪೇಯಿ, ರಾಷ್ಟ್ರದ ಹಿತಾಸಕ್ತಿಗೆ ಮೊದಲ ಸ್ಥಾನ ಅನ್ನುವುದನ್ನು ಒತ್ತಿ ಹೇಳಿದರು. ರಾಷ್ಟ್ರದ ಭದ್ರತೆಗೆ ಧಕ್ಕೆಯಾಗಬಾರದು. ನಮ್ಮ ಸರ್ಕಾರ ಹಾಗೂ ರಾಜಕೀಯ ವ್ಯವಸ್ಥೆ ಶುದ್ಧವಾಗಿರಬೇಕು ಎನ್ನುವ ಆಶಯವನ್ನು ಅವರು ವ್ಯಕ್ತ ಪಡಿಸಿದರು.
ರಕ್ಷಣಾ ಒಪ್ಪಂದಗಳಲ್ಲಿನ ಅವ್ಯವಹಾರ ಆರೋಪ ಕುರಿತಂತೆ ಪ್ರಜಾಪ್ರತಿನಿಧಿಗಳ ಪರಮೋಚ್ಛ ವೇದಿಕೆಯಾದ ಸಂಸತ್ತಿನಲ್ಲಿ ಚರ್ಚಿಸದೆ ಗದ್ದಲ ಉಂಟು ಮಾಡುತ್ತಿರುವ ವಿರೋಧ ಪಕ್ಷಗಳ ನಡವಳಿಕೆಯ ಬಗೆಗೆ ವಿಷಾದವೆನಿಸುತ್ತಿದೆ. ಪ್ರತಿಯಾಂದು ಆರೋಪದ ಸತ್ಯಾಂಶಗಳನ್ನು ಜನರ ಮುಂದಿಡುವುದು ನಮ್ಮ ಜವಾಬ್ದಾರಿ. ಆದರೆ, ನಾವೆಲ್ಲರೂ ನಮ್ಮ ಕರ್ತವ್ಯಗಳನ್ನು ಮರೆಯಬಾರದು. ವಿಡಿಯೋ ಚಿತ್ರೀಕರಣದಲ್ಲಿ ಯಾವುದೇ ಒಪ್ಪಂದಗಳು ದಾಖಲಾಗಿಲ್ಲ ಹಾಗೂ ಈ ಒಪ್ಪಂದಗಳಲ್ಲಿ ಯಾವುದೇ ಸಚಿವರು ಭಾಗಿಯಾಗಿಲ್ಲ ಎಂದು ವಾಜಪೇಯಿ ಸ್ಪಷ್ಟಪಡಿಸಿದರು.
ನಿಮ್ಮ ಕಣ್ಮುಂದೆಯೇ ಕಳೆದ ನನ್ನ 42 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥಹ ಆರೋಪವನ್ನು ಯಾವತ್ತೂ ಎದುರಿಸಿರಲಿಲ್ಲ . ನನ್ನ ಹಾಗೂ ನನ್ನ ಸಹೋದ್ಯೋಗಿಗಳ ವಿರುದ್ಧ ಗುರುತರ ಆರೋಪಗಳನ್ನು ಮಾಡಲಾಗಿದೆ. ಅನೇಕ ವರ್ಷಗಳ ನಂತರ ದೇಶದಲ್ಲಿ ಸ್ಥಿರತೆ ನೆಲೆಸಿದ ಸಂದರ್ಭದಲ್ಲಿ ಹಾಗೂ ಇಡೀ ವಿಶ್ವವೇ ಭಾರತದತ್ತ ಹೆಮ್ಮೆಯಿಂದ ನೋಡುತ್ತಿರುವಾಗ ಇಂಥಾ ಆರೋಪಗಳು ಕೇಳಿ ಬಂದಿವೆ ಎಂದು ಪ್ರಧಾನಿ ಕಳವಳ ವ್ಯಕ್ತಪಡಿಸಿದರು.
ಅವ್ಯವಹಾರಗಳಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗುವುದು ಖಚಿತ ಎಂದು ತಮ್ಮ ಭಾಷಣದಲ್ಲಿ ಆಶ್ವಾಸನೆ ನೀಡಿದ ಪ್ರಧಾನಿಗಳು, ನಾಲ್ಕು ತಿಂಗಳೊಳಗಾಗಿ ಸುಪ್ರಿಂ ಕೋರ್ಟ್ ನ್ಯಾಯಾಧೀಶರು ನಡೆಸುವ ತನಿಖೆ ಪೂರ್ಣವಾಗುವುದು ಎಂದರು. ವಿರೋಧ ಪಕ್ಷಗಳು ಪ್ರಜಾ ಸತ್ತಾತ್ಮಕವಾಗಿ ವರ್ತಿಸಬೇಕು. ಸಂಸತ್ತಿನ ಕಲಾಪಗಳು ನಡೆಯಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿದರು.
(ಇನ್ಫೋ ವಾರ್ತೆ)
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications