ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತುಮಕೂರು ಬಳಿ ಲಾರಿಗಳ ಮುಖಾಮುಖಿ -ಚಞಟನಾಲ್ವರ ಸಜೀವ ದಹನ

By Staff
|
Google Oneindia Kannada News

ತುಮಕೂರು : ತುಮಕೂರು ಹೊರವಲಯದ ಚೆಕ್‌ ಪೋಸ್ಟ್‌ ಬಳಿ ಭಾನುವಾರ ಬೆಳಗ್ಗೆ ಎರಡು ಲಾರಿಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ನಾಲ್ವರು ಸಜೀವವಾಗಿ ಸುಟ್ಟು ಹೋಗಿದ್ದಾರೆ.

ಸೌತೆ ಕಾಯಿ ತುಂಬಿಕೊಂಡು ಶಿರಾದಿಂದ ತುಮಕೂರಿಗೆ ಬರುತ್ತಿದ್ದ ಹಾಗೂ ಕೊಬ್ಬರಿ ತುಂಬಿಕೊಂಡು ಸಾಗುತ್ತಿದ್ದ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದಾಗ ಬೆಂಕಿ ಹತ್ತಿಕೊಂಡು ನಾಲ್ವರು ಸ್ಥಳದಲ್ಲೇ ಮೃತಪಟ್ಟರು. ತೀವ್ರವಾಗಿ ಗಾಯಗೊಂಡಿರುವ ಒಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಅಂಗಡಿಗೆ ಬೆಂಕಿ : ಜಿಲ್ಲೆಯ ಗುಬ್ಬಿ ಮಲ್ಲಿಕಾರ್ಜುನ ದೇವಾಲಯ ಬಳಿ ಇರುವ ಹಣ್ಣಿನ ಅಂಗಡಿಗಳಿಗೆ ಶನಿವಾರ ರಾತ್ರಿ ಬೆಂಕಿ ತಗುಲಿ, ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ. ಅಂಗಡಿಗಳಿಗೆ ಬೆಂಕಿ ಬಿದ್ದಿರುವುದನ್ನು ನೋಡಿದ ಬಸ್‌ ಚಾಲಕರೊಬ್ಬರ ಸಮಯ ಪ್ರಜ್ಞೆಯಿಂದ ಸಂಭವಿಸಬಹುದಾಗಿದ್ದ ಭಾರಿ ಹಾನಿ ತಪ್ಪಿದೆ.

(ತುಮಕೂರು ಪ್ರತಿನಿಧಿಯಿಂದ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X