ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೂಡಲ ಸಂಗಮಕ್ಕೆ ಬಸವ ಸಂಗಮ ಎಂದು ಹೆಸರಿಡಲು ಪರಿಶೀಲನೆ

By Staff
|
Google Oneindia Kannada News

ಬೆಂಗಳೂರು : ಬಸವನ ಬಾಗೇವಾಡಿ, ಬಸವಕಲ್ಯಾಣ ಹಾಗೂ ಕೂಡಲ ಸಂಗಮ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಕೂಡಲ ಸಂಗಮ ಅಭಿವೃದ್ಧಿ ಮಂಡಳಿಯ ಅಧಿನಿಯಮಕ್ಕೆ ಸೂಕ್ತ ತಿದ್ದುಪಡಿ ತರುವ ಬಗ್ಗೆ ರಾಜ್ಯ ಸರಕಾರ ಚಿಂತಿಸುತ್ತಿದೆ. ಈ ವಿಷಯವನ್ನು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್‌ ವಿಧಾನಸಭೆಯಲ್ಲಿ ಮಂಗಳವಾರ ತಿಳಿಸಿದ್ದಾರೆ.

ಕೂಡಲ ಸಂಗಮ ಕ್ಷೇತ್ರಕ್ಕೆ ಬಸವ ಸಂಗಮ ಕ್ಷೇತ್ರ ಎಂದು ಮರುನಾಮಕರಣ ಮಾಡುವ ನಿಟ್ಟಿನಲ್ಲಿ ಸಹ ಸರಕಾರ ಪರಿಶೀಲನೆ ನಡೆಸಿದೆ ಎಂದು ಸಚಿವೆ ರಾಣಿ ಸತೀಶ್‌ ಶಾಸಕ ಬೆಳ್ಳುಬ್ಬಿ ಅವರಿಗೆ ನೀಡಿದ ಉತ್ತರದಲ್ಲಿ ತಿಳಿಸಿದ್ದಾರೆ. ಪ್ರಸ್ತುತ ಅಧಿನಿಯಮಕ್ಕೆ ಸೂಕ್ತ ತಿದ್ದುಪಡಿ ತರುವ ವಿಷಯ ಕಾನೂನು ಸಚಿವಾಲಯದ ಪರಿಶೀಲನೆಯಲ್ಲಿದ್ದು, ಕಾನೂನು ಇಲಾಖೆ ಒಪ್ಪಿಗೆ ನೀಡಿದ ತರುವಾಯ ಕಾರ್ಯಕ್ರಮ ರೂಪಿಸಲಾಗುವುದು ಎಂದೂ ಅವರು ತಿಳಿಸಿದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X