ಪ್ರಭುದೇವ್ ನೇಮಕಕ್ಕೆ ಸುಪ್ರಿಂಕೋರ್ಟ್ ಸೀಲು, ರಾಜಕಾರಣಕ್ಕೆ ಸೋಲು
ಬೆಂಗಳೂರು : ಸೇವೆಯಿಂದ ನಿವೃತ್ತವಾಗುವವರೆಗೆ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕರಾಗಿ ಡಾ. ಪ್ರಭುದೇವ್ ಅವರನ್ನು ನೇಮಿಸಿದ್ದ ಜೆ.ಎಚ್. ಪಟೇಲ್ ಸರ್ಕಾರದ ನಿರ್ಣಯವನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದಿದೆ. ಇದರಿಂದಾಗಿ ಪ್ರಭುದೇವ್ ಅವರ ನೇಮಕವನ್ನು ಪ್ರಶ್ನಿಸಿದ್ದ ಕೆಲವು ವೈದ್ಯರಿಗೆ ಹಾಗೂ ಅವರ ಒತ್ತಡಕ್ಕೆ ಮಣಿದಿದ್ದ ಕೃಷ್ಣ ಸರ್ಕಾರಕ್ಕೆ ಮುಖಭಂಗವಾದಂತಾಗಿದೆ.
ಸುಪ್ರಿಂಕೋರ್ಟ್ನ ಇಬ್ಬರು ನ್ಯಾಯಮೂರ್ತಿಗಳ ಜಂಟಿ ನ್ಯಾಯಪೀಠ ಸೋಮವಾರ ಈ ಮಹತ್ವದ ತೀರ್ಮಾನವನ್ನು ನೀಡಿತು. ಇದಕ್ಕೆ ಮುನ್ನ ನವಂಬರ್ 3 ರಂದು ರಾಜ್ಯ ಹೈಕೋರ್ಟ್ನ ವಿಭಾಗೀಯ ಪೀಠ ಕೂಡ ಪ್ರಭುದೇವ್ ಅವರ ನೇಮಕವನ್ನು ಸಮರ್ಥಿಸಿತ್ತು . ಆದರೆ, ಡಾ. ಬಿ. ಕುಮಾರ್, ಡಾ. ಕೆ.ಎಸ್. ಭೂಪಾಲ ಹಾಗೂ ಡಾ. ಸಿ.ಎನ್. ಮಂಜುನಾಥ್ ಅವರುಗಳು ವಿಭಾಗೀಯ ಪೀಠದ ನಿರ್ಧಾರವನ್ನು ಸುಪ್ರಿಂಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
1996 ರಲ್ಲಿ ಜಯದೇವ ಹೃದ್ರೋಗ ಸಂಸ್ಥೆಗೆ ಮೂರು ವರ್ಷಗಳ ಕಾಲ ನಿರ್ದೇಶಕರಾಗಿ ನೇಮಕಗೊಂಡಿದ್ದ ಪ್ರಭುದೇವ್ ಅವರನ್ನು, 1997 ರಲ್ಲಿ ನಿವೃತ್ತಿಯವರೆಗೆ ನಿರ್ದೇಶಕರನ್ನಾಗಿ ಮುಂದುವರಿಸಲಾಗಿತ್ತು . ಇದರಿಂದಾಗಿ ರೊಚ್ಚಿಗೆದ್ದ ಆಸ್ಪತ್ರೆಯ ಕೆಲವು ವೈದ್ಯರು ಪ್ರಭುದೇವ್ ಅವರ ಪದಚ್ಯುತಿಗೆ ಸತತ ಪ್ರಯತ್ನಗಳನ್ನು ನಡೆಸಿದ್ದರು. ತಮ್ಮ ಅಳಿಯ ಡಾ. ಮಂಜುನಾಥ್ ಅವರನ್ನು ನಿರ್ದೇಶಕ ಹುದ್ದೆಗೆ ತರಲು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಯತ್ನಿಸುತ್ತಿದ್ದಾರೆನ್ನುವ ಮಾತುಗಳೂ ಕೇಳಿ ಬಂದಿದ್ದವು. ಪ್ರಸ್ತುತ ಸುಪ್ರಿಂಕೋರ್ಟ್ ತೀರ್ಮಾನದಿಂದಾಗಿ ಪ್ರಭುದೇವ್ ನಿರ್ದೇಶಕರಾಗಿ ಮುಂದುವರಿಯುವುದು ಖಚಿತವಾಗಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications