Get Updates
Get notified of breaking news, exclusive insights, and must-see stories!

ಸಂಸತ್ತಿನ ಘನತೆ ಎತ್ತಿ ಹಿಡಿಯಲು ವಿಶ್ವೇಶ ತೀರ್ಥ ಸ್ವಾಮೀಜಿ ಮನವಿ

ಉಡುಪಿ : ತೆಹಲ್ಕಾ ಬಯಲು ಮಾಡಿದ ಹಗರಣದ ಹಿನ್ನೆಲೆಯಲ್ಲಿ ಸಂಸ್ತತಿನ ಹೊರಗೆ ಸದ್ದು ಮಾಡುತ್ತಿರುವ ವಿರೋಧ ಪಕ್ಷದ ಸದಸ್ಯರು ಸದನದಲ್ಲಿ ಭಾಗವಹಿಸುವ ಮೂಲಕ ಸಂಸತ್ತಿನ ಘನತೆಯನ್ನು ಎತ್ತಿ ಹಿಡಿಯಬೇಕೆಂದು ಪೇಜಾವರ ಮಠಾಧೀಶ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಸಂಸತ್‌ ಸದ್ಯಸರಲ್ಲಿ ಮನವಿ ಮಾಡಿದ್ದಾರೆ.

ಸದನದ ಘನತೆಯನ್ನು ಕಾಪಾಡುವುದು ಸದಸ್ಯರ ಕರ್ತವ್ಯ. ಪ್ರತಿಭಟನೆ ವ್ಯಕ್ತಪಡಿಸುವುದಕ್ಕೂ ಒಂದು ಮಿತಿಯಿದೆ ಎಂದು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಸ್ವಾಮೀಜಿ ಹೇಳಿದರು. ತಾವು ಯಾವುದೇ ರಾಜಕೀಯ ಪಕ್ಷವನ್ನು ಈ ಹೇಳಿಕೆಯ ಮೂಲಕ ಸಮರ್ಥಿಸುತ್ತಿಲ್ಲ ಎಂದು ಸ್ಪಷ್ಟ ಪಡಿಸಿದ ಸ್ವಾಮೀಜಿ, ಎಲ್ಲಾ ಸದಸ್ಯರು ಸದನದಲ್ಲಿ ಪಾಲ್ಗೊಳ್ಳಬೇಕು ಹಾಗೂ ಪ್ರಕರಣದ ಬಗ್ಗೆ ಚರ್ಚಿಸಬೇಕು ಎಂಬುದು ತಮ್ಮ ಆಶಯವಾಗಿದೆ ಎಂದರು.

ಪ್ರಕರಣದ ಬಗ್ಗೆ ಆಡಳಿತ ಹಾಗೂ ವಿರೋಧ ಪಕ್ಷಗಳಿಂದ ಸದನದಲ್ಲಿಯೇ ಚರ್ಚೆ ನಡೆಯಲಿ. ತನಿಖೆಯ ಸ್ವರೂಪ, ತನಿಖೆಯ ಮುಖ್ಯಸ್ಥರು ಹಾಗೂ ಇತರ ಮಾನದಂಡಗಳೆಲ್ಲಾ ಸಂಸತ್ತಿನಲ್ಲೇ ನಿರ್ಧಾರವಾಗಲಿ ಎಂದು ಸ್ವಾಮೀಜಿ ಹೇಳಿದರು.

ಸಂಸತ್ತಿನ ಕಲಾಪಗಳು ಸ್ಥಗಿತಗೊಂಡಿರುವ ಬಗ್ಗೆ ತೀವ್ರ ವಿಷಾದ ವ್ಯಕ್ತ ಪಡಿಸಿದ ಅವರು, ಈ ನಡವಳಿಕೆ ಪ್ರಜಾಪ್ರಭುತ್ವಕ್ಕೆ ತಕ್ಕುದಲ್ಲ ಎಂದರು. ತಾವು ಮೊದಲಿನಿಂದಲೂ ಭ್ರಷ್ಟಾಚಾರವನ್ನು ವಿರೋಧಿಸಿಕೊಂಡೇ ಬಂದಿದ್ದೇವೆ. ತೆಹಲ್ಕಾ ಬಯಲು ಮಾಡಿರುವ ಪ್ರಕರಣದಿಂದ ಎಲ್ಲಾ ಪಕ್ಷಗಳು ಒಟ್ಟಿಗೆ ಕೂತು ,ಚುನಾವಣೆಯ ಖರ್ಚನ್ನು ಕಡಿಮೆ ಮಾಡುವ ಕುರಿತು ಚರ್ಚಿಸಬೇಕಾದ ಸಂದರ್ಭ ಬಂದಿದೆ ಎಂದು ವಿಶ್ವೇಶ ತೀರ್ಥರು ಹೇಳಿದರು.

(ಯುಎನ್‌ಐ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+