ನಾಗಝರಿ ವಿದ್ಯುದಾಗಾರದ ಮೊದಲ ಘಟಕದ ಸಾಮರ್ಥ್ಯವರ್ಧನೆ
ಬೆಂಗಳೂರು : ಈ ಬೇಸಿಗೆಯಲ್ಲಿ ಹಾಗೂ ಮುಂಬರುವ ದಿನಗಳಲ್ಲಿ ರಾಜ್ಯವು ಭಾರಿ ವಿದ್ಯುತ್ ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದರು. ಈ ಮಧ್ಯೆ ನಾಗಝರಿ ಹಾಗೂ ರಾಯಚೂರು ವಿದ್ಯುತ್ ಘಟಕದಲ್ಲೂ ತಾಂತ್ರಿಕ ತೊಂದರೆಗಳು ಕಾಣಿಸಿಕೊಂಡಿತ್ತು.
ಈಗ ಪರಿಸ್ಥಿತಿ ಕೊಂಚ ಆಶಾದಾಯಕವಾಗಿದೆ. ಕಾಳಿ ಜಲ ವಿದ್ಯುತ್ ಯೋಜನೆಯ ನಾಗಝರಿ ವಿದ್ಯುದಾಗಾರದ ಮೊದಲ ಘಟಕದ ಸಾಮರ್ಥ್ಯವನ್ನು 135 ಮೆಗಾವ್ಯಾಟ್ನಿಂದ 150 ಮೆಗಾವ್ಯಾಟ್ಗೆ ಹೆಚ್ಚಿಸಲಾಗಿದೆ. ಈ ಹೆಚ್ಚುವರಿ ವಿದ್ಯುತ್ ಮಾರ್ಚ್ 21ರ ಬುಧವಾರ ರಾತ್ರಿ 11.43ರಿಂದ ರಾಜ್ಯ ವಿದ್ಯುತ್ ಜಾಲಕ್ಕೆ ಸೇರಿದೆ. ಇದರಿಂದಾಗಿ ಹೆಚ್ಚು ವಿದ್ಯುತ್ ಬಳಸುವ ಕಾಲದಲ್ಲಿ ರಾಜ್ಯ ಜಾಲಕ್ಕೆ 15 ಮೆಗಾವ್ಯಾಟ್ ಹೆಚ್ಚುವರಿ ವಿದ್ಯುತ್ ದೊರಕಲಿದೆ.
ಅಲ್ಲದೆ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರದಲ್ಲಿ ಕಳೆದ ಕೆಲವು ದಿನಗಳಿಂದ ಕೆಟ್ಟು ಹೋಗಿರುವ ಎರಡು ಘಟಕಗಳು ಇನ್ನು 15 ದಿನಗಳ ಅವಧಿಯಲ್ಲಿ ಮತ್ತೆ ಕಾರ್ಯಾರಂಭ ಮಾಡಲಿವೆ. ಈ ವಿಷಯವನ್ನು ವಿದ್ಯುತ್ ಖಾತೆ ಸಚಿವ ವೀರಕುಮಾರ್ ಪಾಟೀಲ್ ತಿಳಿಸಿದ್ದಾರೆ.
ಇನ್ನು 10 ದಿನಗಳ ಅವಧಿಯಲ್ಲಿ ಈ ಘಟಕಗಳ ದುರಸ್ತಿ ಕಾರ್ಯ ಪೂರ್ಣಗೊಳ್ಳಲಿದ್ದು, 15 ದಿನಗಳಲ್ಲಿ ಕಾರ್ಯಾರಂಭ ಮಾಡಲಿವೆ. ನಾಗಝರಿಯ 3ನೇ ಘಟಕದ ನವೀಕರಣ ಕಾರ್ಯ ಕೂಡ ಪ್ರಗತಿಯಲ್ಲಿದ್ದು, ಇದರ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಕೂಡ 150 ಮೆಗಾವ್ಯಾಟ್ಗೆ ಹೆಚ್ಚಲಿದೆ. 3 ನೇ ಘಟಕದ ಸಾಮರ್ಥ್ಯ ಹಾಲಿ 135 ಮೆಗಾವ್ಯಾಟ್ಗಳಾಗಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications