ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತೆಹಲ್ಕಾ ಹಗರಣದ ತನಿಖಾ ಮುಖ್ಯಸ್ಥರಾಗಿ ನ್ಯಾಯಮೂರ್ತಿ ವೆಂಕಟಸ್ವಾಮಿ

By Staff
|
Google Oneindia Kannada News

ನವದೆಹಲಿ : ಸುಪ್ರಿಂಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ವೆಂಕಟಸ್ವಾಮಿ ತೆಹಲ್ಕಾ ಬಯಲಿಗೆಳೆದ ರಕ್ಷಣಾ ಹಗರಣ ತನಿಖೆ ನಡೆಸಲಿರುವ ಏಕ ಸದಸ್ಯ ಸಮಿತಿಯ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ.

ಚೆನ್ನೈನಿಂದ ದೂರವಾಣಿ ಮೂಲಕ ಖುದ್ದು ನ್ಯಾಯಮೂರ್ತಿ ವೆಂಕಟಸ್ವಾಮಿ ಈ ವಿಷಯ ದೃಢಪಡಿಸಿದ್ದಾರೆ. ಭಾರತದ ಮುಖ್ಯ ನ್ಯಾಯಮೂರ್ತಿ ತಮ್ನನ್ನು ಈ ಕೆಲಸ ವಹಿಸಿಕೊಳ್ಳುವಂತೆ ಕೇಳಿಕೊಂಡರು. ಅವರೊಂದಿಗೆ ಮಾತುಕತೆ ನಡೆಸಿದ ನಂತರ ತನಿಖಾ ಸಮಿತಿಯ ಮುಖ್ಯಸ್ಥಿಕೆ ವಹಿಸಿಕೊಳ್ಳಲು ಒಪ್ಪಿದೆ ಎಂದು ವೆಂಕಟಸ್ವಾಮಿ ಹೇಳಿದರು.

ತೆಹಲ್ಕಾ ಪ್ರಕರಣದ ತನಿಖೆಗೆ ಹಾಲಿ ನ್ಯಾಯಾಧೀಶರನ್ನು ನೇಮಿಸುವ ಪ್ರಸ್ತಾವನೆಯನ್ನು ತಳ್ಳಿಹಾಕಿದ್ದ ಭಾರತದ ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಆನಂದ್‌, ಕಳೆದ ವರ್ಷ ನಿವೃತ್ತರಾಗಿರುವ ನ್ಯಾಯಮೂರ್ತಿ ವೆಂಕಟಸ್ವಾಮಿ ಅವರನ್ನು ಈ ಕೆಲಸಕ್ಕೆ ಹಚ್ಚಿದ್ದಾರೆ. ಏಕ ಸದಸ್ಯ ತನಿಖಾ ಸಮಿತಿ ಸ್ಥಾಪನೆಗೆ ಮಾರ್ಚ್‌ 16ರಂದು ಸಚಿವ ಸಂಪುಟ ಒಪ್ಪಿಗೆ ನೀಡಿತ್ತು.

ತನಿಖಾ ಪೂರ್ವ ವಿಷಯಗಳನ್ನು ಮನದಟ್ಟು ಮಾಡಿಕೊಳ್ಳಲು ನ್ಯಾಯಮೂರ್ತಿ ವೆಂಕಟಸ್ವಾಮಿ ಮುಂದಿನ ವಾರ ದೆಹಲಿಗೆ ತೆರಳುವ ನಿರೀಕ್ಷೆಯಿದೆ. ತನಿಖೆಗೆ ಸರ್ಕಾರ ನಿಗದಿ ಪಡಿಸಿರುವ 4 ತಿಂಗಳ ಗಡುವು ಸಾಕಾಗಲಿದೆ ಎಂದು ನ್ಯಾಯಮೂರ್ತಿ ವೆಂಕಟಸ್ವಾಮಿ ಹೇಳಿದ್ದಾರೆ.

(ಪಿಟಿಐ)

ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X