ಬೆಂಗಳೂರು ಅಭಿವೃದ್ಧಿಗೆ ‘ರಾಜಧಾನಿ ಅಭಿವೃದ್ಧಿ ನಿಧಿ’ ಯೋಜನೆ
ಬೆಂಗಳೂರು : ರಾಷ್ಟ್ರದ ನಾಲ್ಕು ಮಹಾನಗರಗಳ ಸಾಲಿನಲ್ಲಿ ಬೆಂಗಳೂರನ್ನೂ ಸೇರಿಸಲು ರಾಜಧಾನಿ ಅಭಿವೃದ್ಧಿ ನಿಧಿ ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಮುಂದಿನ ಸಾಲಿಗೆ ಮಂಡಿಸಲಾಗಿರುವ ರಾಜ್ಯ ಬಜೆಟ್ನಲ್ಲಿ 50 ಕೋಟಿ ರುಪಾಯಿ ಒದಗಿಸಲಾಗಿದೆ.
ಬೆಂಗಳೂರು ನಗರವನ್ನು ಮಹಾನಗರದ ಸಾಲಿಗೆ ಸೇರಿಸುವ ಮೊದಲ ಪ್ರಯತ್ನವಾಗಿ ರಸ್ತೆಗಳು, ಫ್ಲೈ ಓವರ್ಗಳು, ಸುರಂಗಮಾರ್ಗಗಳನ್ನು ಕೆ.ಆರ್.ಡಿ.ಸಿ.ಎಲ್ಗೆ ವಹಿಸಲಾಗುವುದು ಎಂದು ಬಜೆಟ್ ಮಂಡನೆಯ ಸಂದರ್ಭದಲ್ಲಿ ಮುಖ್ಯಮಂತ್ರಿ ಕೃಷ್ಣ ತಿಳಿಸಿದ್ದಾರೆ.
ಬೆಂಗಳೂರಿನ ನೀರಿನ ಸಮಸ್ಯೆ ನೀಗಿಸಲು, ಪರಿಸರ ರಕ್ಷಣೆಗೂ ಗಮನ ಹರಿಸಲಾಗಿದೆ. ಬೆಂಗಳೂರು ನಗರದಲ್ಲಿ ಸಂಚಾರದ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಲಾಗಿದೆ. ಸಂಚಾರಿ ಪೊಲೀಸರು ಸಕ್ಷಿಂಚಾರಿ ನಿಯಮ ಉಲ್ಲಂಘಿಸುವ ಚಾಲಕರಿಂದ ವಸೂಲಿ ಮಾಡುವ ದಂಡ ಶುಲ್ಕವನ್ನು ಸಂಚಾರ ಸುಧಾರಣೆಗೇ ಬಳಸಲಾಗುವುದು ಎಂದೂ ಅವರು ತಿಳಿಸಿದರು.
ರಾಜ್ಯದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಸುಧಾರಿಸುವ ಪ್ರಸ್ತಾಪವೂ ಬಜೆಟ್ನಲ್ಲಿ ಸೇರಿದೆ. ಈ ಸಂಬಂಧ 180 ಕೋಟಿ ರುಪಾಯಿ ವೆಚ್ಚದಲ್ಲಿ 1945 ಹೊಸ ಬಸ್ಗಳನ್ನು ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿಸಲೂ ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ.
ಸಂಸದರ ಅಭಿವೃದ್ಧಿ ನಿಧಿಯ ಮಾದರಿಯಲ್ಲೇ ಶಾಸಕರ ಕ್ಷೇತ್ರಾಭಿವೃದ್ಧಿ ನಿಧಿ ಸ್ಥಾಪಿಸುವ ಪ್ರಸ್ತಾಪ ಆಯವ್ಯಯದಲ್ಲಿ ಬಂದಿದೆ. ಈ ಯೋಜನೆ ಅಡಿಯಲ್ಲಿ ಪ್ರತಿ ಶಾಸಕರಿಗೂ 25 ಲಕ್ಷ ರುಪಾಯಿಗಳನ್ನು ಕ್ಷೇತ್ರದ ಅಭಿವೃದ್ಧಿಗೆ ವಿನಿಯೋಗಿಸಲು ನೀಡಲು ಉದ್ದೇಶಿಸಲಾಗಿದೆ.
ನಮ್ಮ ಹೊಲ, ನಮ್ಮ ರಸ್ತೆ, ವನ ವಿಕಾಸ, ನಿರ್ಮಲ ಜ್ಯೋತಿ, ಗಿಡ ಮೂಲಿಕಾ ಔಷಧ ಪ್ರಾಧಿಕಾರ, ನವಗ್ರಾಮ ಮುಂತಾದ ಹೊಸ ಯೋಜನೆಗಳನ್ನೂ ಪ್ರಕಟಿಸಲಾಗಿದೆ. ಎಲ್ಲ ಗ್ರಾಮಗಳ ಸಂಪರ್ಕ ರಸ್ತೆ ಸುಧಾರಣೆ, ಹೊಸ ರಸ್ತೆ, ಗ್ರಾಮ ಪಂಚಾಯಿತಿಗಳಿಗೆ ಹೊಸ ಬಡಾವಣೆ ಸ್ಥಾಪಿಸಲು ಅವಕಾಶ, 15 ಲಕ್ಷ ಕೊಳಗೇರಿ ನಿವಾಸಿಗಳಿಗೆ ಅನುಕೂಲ ವಾಗುವಂತೆ ವಿದ್ಯುತ್ ದೀಪ, ಖಾಸಗಿ ಹಾಗೂ ಸಾರ್ವಜನಿಕರ ನೆರವಿನಿಂದ ಗಿಡ ಬೆಳೆಸುವ ಕಾರ್ಯಕ್ರಮಗಳು ಹೊಸ ಯೋಜನೆಯಲ್ಲಿ ಸೇರಿವೆ.
(ಇನ್ಫೋ ವರದಿ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications