ಹೂಹಾಸಿಗೆ ಮೇಲೆ ಪವಡಿಸಿದವರಿಗೆ ಕೇಳಿಸೀತೆ ಈ ಮುಳ್ಳಿನ ಕೂಗು
ಬೆಂಗಳೂರು : ಸತ್ಯಾಗ್ರಹ, ಮೆರವಣಿಗೆಗಳು ಅರ್ಥ ಕಳೆದುಕೊಂಡ ಮೇಲೆ ಪ್ರತಿಭಟನೆಯಲ್ಲೂ ಹೊಸ ಹೊಸ ಬಗೆಗಳು ಹುಟ್ಟಿಕೊಂಡಿವೆ. ಪಂಜಿನ ಮೆರವಣಿಗೆ, ಆಮರಣ ಉಪವಾಸ, ಮಾನವ ಸರಪಳಿ, ಕತ್ತೆಗಳ ಮೆರವಣಿಗೆ, ಅರೆಬೆತ್ತಲೆ ಮೆರವಣಿಗೆ, ಉರುಳು ಸೇವೆ, ಕಪ್ಪು ಪಟ್ಟಿ ಪ್ರದರ್ಶನ, ಶಂಖ ಜಾಗಟೆ, ತಮಟೆ, ನಗಾರಿ ಬಾರಿಸುವ ಪ್ರದರ್ಶನಗಳೆಲ್ಲಾ ಈಗ ಔಟ್ಡೇಟೆಡ್ ಆಗಿ ಹೋಗಿದೆ.
ಈಗ ಹೊಸದೊಂದು ಬಗೆಯ ಪ್ರತಿಭಟನೆ ಬುಧವಾರ ಬೆಳಗ್ಗೆ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಮನೆ ಮುಂದೆ ನಡೆಯಲಿದೆ. ಶಾಶ್ವತ ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರಿಗೆ ಸೇವಾ ಭದ್ರತೆ ಮತ್ತು ವೇತನ ಬಿಡುಗಡೆ ಮಾಡುವಂತೆ ಒತ್ತಾಯಿಸಿ ರಾಜ್ಯದ ಅನುದಾನ ರಹಿತ ಶಾಲಾ ಕಾಲೇಜುಗಳ ನೌಕರರ ಹಾಗೂ ಆಡಳಿತ ಮಂಡಳಿಯ ಒಕ್ಕೂಟದ ಅಧ್ಯಕ್ಷ ಸಿ.ಎಚ್. ಗೌಡರ್ ನೇತೃತ್ವದಲ್ಲಿ ಒಕ್ಕೂಟದ ಸದಸ್ಯರು ಮುಳ್ಳಿನ ಪಾದರಕ್ಷೆಗಳ ಮೇಲೆ ನಿಂತು ಪ್ರತಿಭಟಿಸಿ, ಮುಖ್ಯಮಂತ್ರಿಗಳ ಗಮನ ಸೆಳೆಯಲು ನಿರ್ಧರಿಸಿದ್ದಾರೆ.
ಬೆಳಗ್ಗೆ 10 ಗಂಟೆಗೆ ಚಿಕ್ಕ ಲಾಲ್ಬಾಗ್ನಿಂದ ಮೆರವಣಿಗೆಯಲ್ಲಿ ತೆರಳುವ ಸದಸ್ಯರು ಮುಖ್ಯಮಂತ್ರಿಗಳ ಮನೆ ಮುಂದೆ ಜಮಾಯಿಸಿ, ತಾವೇ ಹೊತ್ತು ತರುವ ಮುಳ್ಳಿನ ಚಪ್ಪಲಿಗಳ ಮೇಲೆ ನಿಂತು ರಕ್ತ ಸುರಿಸಿ, ನಾಡಿನ ಜನತೆಯ ಹಾಗೂ ಸರಕಾರದ ಗಮನವನ್ನು ತಮ್ಮತ್ತ ಸೆಳೆಯುವ ಸಾಹಸ ಮಾಡುತ್ತಿದ್ದಾರೆ.
ಬಹುಶಃ ಮುಳ್ಳಿನ ಚಪ್ಪಲಿ ಪ್ರತಿಭಟನೆಗೆ ಬೆಲೆ ಬಾರದಿದ್ದರೆ, ಮುಳ್ಳಿನ ಹಾಸಿಗೆ ಮೇಲೆ ಮಲಗುವ ಕಾರ್ಯಕ್ರಮವನ್ನು ಹಾಕಿಕೊಳ್ಳುತ್ತಾರೋ ಏನೋ!
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications