ಟರ್ಮಿನೇಟರ್ ತಳಿ ಪ್ರಯೋಗಕ್ಕೆ ಅನುಮತಿ ಇಲ್ಲ - ಜಯಚಂದ್ರ
ಬೆಂಗಳೂರು : ಟರ್ಮಿನೇಟರ್ ತಳಿ ತಂತ್ರಜ್ಞಾನ ಪ್ರಯೋಗಕ್ಕೆ ಕರ್ನಾಟಕದಲ್ಲಿ ಅನುಮತಿ ನೀಡಿಲ್ಲ ಎಂದು ಕೃಷಿ ಸಚಿವ ಟಿ.ಬಿ. ಜಯಚಂದ್ರ ರಾಜ್ಯ ವಿಧಾನ ಪರಿಷತ್ತಿನಲ್ಲಿ ಬುಧವಾರ ಸ್ಪಷ್ಟ ಪಡಿಸಿದ್ದಾರೆ.
ಜಾತ್ಯತೀತ ಜನತಾದಳದ ಸದಸ್ಯ ಬಸವರಾಜ ಬೊಮ್ಮಾಯಿ ಅವರ ಪ್ರಶ್ನೆಯಾಂದಕ್ಕೆ ಉತ್ತರ ನೀಡುತ್ತಿದ್ದ ಅವರು, ಬೋರರ್ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಮಹಾರಾಷ್ಟ್ರ ಹೈಬ್ರಿಡ್ ಸೀಡ್ಸ್ ಕಂಪೆನಿಗೆ ಮಾತ್ರ ಕೇಂದ್ರದ ಅನುಮತಿಯಾಂದಿಗೆ 14 ಪ್ರದೇಶಗಳಲ್ಲಿ ಬಿಟಿ ಹತ್ತಿಯ ಹೈಬ್ರಿಡ್ ತಳಿಯ ಪ್ರಯೋಗಕ್ಕೆ ಅವಕಾಶ ಮಾಡಿಕೊಡಲಾಗಿದೆ. ಈಗಾಗಲೇ ಕೆಲವು ರಾಜ್ಯಗಳು ಇಂತಹ ಪ್ರಯತ್ನಗಳನ್ನು ಆರಂಭಿಸಿವೆ ಎಂದರು.
ಇತರ ರಾಜ್ಯಗಳಿಂದ ಹೈಬ್ರಿಡ್ ತಳಿ ರಾಜ್ಯದೊಳಕ್ಕೆ ಕಳ್ಳದಾರಿಯಲ್ಲಿ ಬಾರದಂತೆ ನೋಡಿಕೊಳ್ಳಲಾಗುವುದು. ಈಗಾಗಲೇ 12 ಮಂದಿಯ ಸಮಿತಿಯಾಂದು ಈ ನಿಟ್ಟಿನಲ್ಲಿ ಕೆಲಸ ಮಾಡುತ್ತಿದೆ. ಸದ್ಯಕ್ಕೆ ಬಿಟಿ ಹತ್ತಿಗೆ ಬಂದಿರುವ ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಹತ್ತಿ ಬೆಳೆಯುವುದನ್ನು ಕೈಬಿಡಲಾಗಿದೆ. ಈ ಬಗ್ಗೆ ರೈತರು ಹೆದರಬೇಕಾದ ಅವಶ್ಯಕತೆ ಇಲ್ಲ. ಹೊಸ ತಂತ್ರಜ್ಞಾನಗಳ ಬಗ್ಗೆ ರೈತರಿಗೆ ತಿಳಿಸುವುದು ಸರಕಾರದ ಕರ್ತವ್ಯವಾಗಿದ್ದು, ಸರಕಾರ ಅದಕ್ಕೆ ಬದ್ಧವಾಗಿದೆ ಎಂದು ಹೇಳಿದರು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications