ತಾಂತ್ರಿಕ ದೋಷ, ಬೆಂಕಿ, ಜಿಎಸ್ಎಲ್ವಿ ಉಡ್ಡಯನಕ್ಕೆ ಹಿನ್ನಡೆ
ಶ್ರೀಹರಿಕೋಟಾ : ಭಾರೀ ನಿರೀಕ್ಷೆ ಮೂಡಿಸಿದ್ದ ಮೂರು ಹಂತಗಳ ಜಿಯೋ ಸಿಂಕ್ರೋನಸ್ ಉಪಗ್ರಹ ಉಡ್ಡಯನ ವಾಹನ (ಜಿ.ಎಸ್.ಎಲ್.ವಿ) ಆಂಧ್ರಪ್ರದೇಶದ ಶ್ರೀಹರಿ ಕೋಟಾದಿಂದ ಮೇಲೆ ಹಾರುವಲ್ಲಿ ಬುಧವಾರ ವಿಫಲವಾಯಿತು. ಇದರಿಂದಾಗಿ ಭಾರತದ ಬಾಹ್ಯಾಕಾಶ ಕ್ಷೇತ್ರಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.
ಬುಧವಾರ ಮಧ್ಯಾಹ್ನ 3.55ರ ಸಮಯದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತು. ಉಡಾವಣೆಗೆ ಕೆಲವೇ ಕ್ಷಣಗಳು ಬಾಕಿ ಇದ್ದಾಗ, ಉಡಾವಣೆ ಸ್ಥಳದಲ್ಲೇ ಬೆಂಕಿ ಕಾಣಿಸಿಕೊಂಡಿತು. ಕೂಡಲೇ ಜಿಎಸ್ಎಲ್ವಿ ಉಡಾವಣೆಯ ನೇರ ಪ್ರಸಾರ ಮಾಡುತ್ತಿದ್ದ ದೂರದರ್ಶನ ತನ್ನ ನೇರ ಪ್ರಸಾರ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿತು.
ಭೂಮಿಯಿಂದ ಮೇಲಕ್ಕೆ 36,000 ಕಿ.ಮೀಟರ್ ಕಕ್ಷೆಯಲ್ಲಿ ಸುಮಾರು 2000 ಕೆ.ಜಿ. ತೂಕದ ಉಪಗ್ರಹ ಕೊಂಡೊಯ್ಯುವ ಸಾಮರ್ಥ್ಯದೊಂದಿಗೆ ವಿನ್ಯಾಸಗೊಳಿಸಲಾಗಿದ್ದ ಜಿ.ಎಸ್.ಎಲ್.ವಿ. ಮೂರು ಹಂತಗಳ ಉಡ್ಡಯನ ವಾಹನವಾಗಿದ್ದು, 49 ಮೀಟರ್ ಎತ್ತರವಿದೆ.
ಜಿಯೋ ಸಿಂಕ್ರೋನಸ್ ವರ್ಗಾವಣೆ ಕಕ್ಷೆಯಲ್ಲಿ ಉಪಗ್ರಹವನ್ನು ಸ್ಥಾಪಿಸುವ ರೀತಿಯಲ್ಲಿ ಜಿ.ಎಸ್.ಎಲ್.ವಿ.ಯನ್ನು ವಿನ್ಯಾಸ ಮಾಡಲಾಗಿತ್ತು. ಸಾಲಿಡ್, ಲಿಕ್ವಿಡ್ ಮತ್ತು ಕ್ರಯೋಜನಿಕ್ ಹಂತಗಳಲ್ಲಿ ವಾಹಕವನ್ನು ಸಿದ್ಧಪಡಿಸಲಾಗಿತ್ತು. ಸತತ ಪರೀಕ್ಷೆಗಳ ತರುವಾಯ ಬುಧವಾರ ಉಡಾವಣೆಗೆ ಸಮಯ ನಿಗದಿಗೊಳಿಸಲಾಗಿತ್ತು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications