ಶೇ.4ರಷ್ಟು ತೆರಿಗೆ ವಿರೋಧಿಸಿ ಶುಕ್ರವಾರ ಪುಸ್ತಕ ಮಳಿಗೆ ಬಂದ್
ಬೆಂಗಳೂರು : ಪುಸ್ತಕಗಳಿಗೆ ಶೇ. 4 ರಷ್ಟು ತೆರಿಗೆ ವಿಧಿಸುವ ಸರ್ಕಾರದ ನಿರ್ಧಾರವನ್ನು
ಕೆಟ್ಟ ಸಂಸ್ಕೃತಿ ಎಂದು ಕನ್ನಡ ಸಾಹಿತಿಗಳು ಟೀಕಿಸಿದ್ದರೆ, ಸರ್ಕಾರದ ನಿರ್ಧಾರವನ್ನು ಪ್ರತಿಭಟಿಸಿ ಸಾಹಿತಿಗಳು, ಲೇಖಕರು, ಪುಸ್ತಕ ಮಾರಾಟಗಾರರ ಹಾಗೂ ಪ್ರಕಾಶಕರ ಸಂಘಟನೆಗಳು ಶುಕ್ರವಾರ ರಾಜ್ಯಾದ್ಯಂತ ಪುಸ್ತಕ ಮಳಿಗೆ ಬಂದ್ ಮಾಡುವ ನಿರ್ಧಾರ ಕೈಗೊಂಡಿವೆ.
ಈ ಸಂಬಂಧ ರಾಜ್ಯದ ಎಲ್ಲ ಪುಸ್ತಕ ಅಂಗಡಿಗಳನ್ನು ಶುಕ್ರವಾರ ಮುಚ್ಚುವಂತೆ ಕರೆ ನೀಡಿವೆ. ಜಿಲ್ಲಾ ಕೇಂದ್ರಗಳಲ್ಲಿ ಪುಸ್ತಕ ಮುದ್ರಣ, ಮಾರಾಟ ಚಟುವಟಿಕೆ ನಿಲ್ಲಿಸಿ, ಪ್ರತಿಭಟನಾ ಸಭೆ ಹಾಗೂ ಮೆರವಣಿಗೆ ನಡೆಸುವಂತೆ ಸಹ ಕರೆ ನೀಡಲಾಗಿದೆ.
ಹಿರಿಯ ಸಂಶೋಧಕ ಡಾ. ಎಂ. ಚಿದಾನಂದಮೂರ್ತಿ, ಕೊ. ಚನ್ನಬಸಪ್ಪ, ಜಿ. ನಾರಾಯಣ, ಪ್ರೊ. ಜಿ. ವೆಂಕಟಸುಬ್ಬಯ್ಯ, ಡಾ. ಎಲ್.ಎಸ್. ಶೇಷಗಿರಿರಾವ್, ಡಾ. ಸುಮತೀಂದ್ರ ನಾಡಿಗ, ಡಾ. ಎನ್.ಎಸ್. ಲಕ್ಷ್ಮೀನಾರಾಯಣ ಭಟ್ ಮೊದಲಾದವರು ಈ ವಿಷಯವನ್ನು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಬೆಂಗಳೂರಿನಲ್ಲೂ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಶುಕ್ರವಾರ ಬೆಳಗ್ಗೆ 10 ಗಂಟೆಗೆ ಸಭೆ ನಡೆಯಲಿದೆ. ಆನಂತರ ಬೃಹತ್ ಮೆರವಣಿಗೆಯಲ್ಲಿ ತೆರಳಿ ರಾಜ್ಯಪಾಲರು ಹಾಗೂ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸುವ ಕಾರ್ಯಕ್ರಮವೂ ಇದೆ. ಮುಖ್ಯಮಂತ್ರಿಗಳು ತಮ್ಮ ನಿಲವು ಬದಲಿಸದಿದ್ದರೆ, ಪುಸ್ತಕೋದ್ಯಮ ನೆರೆರಾಜ್ಯಕ್ಕೆ ವಲಸೆ ಹೋಗುವ ಅಪಾಯವೂ ಇದೆ ಎಂದು ಸಾಹಿತಿಗಳು ಅಭಿಪ್ರಾಯಪಟ್ಟರು.
(ಇನ್ಫೊ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications