ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ನಾರಾಯಣನ್‌ ಅವರಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ

By Staff
|
Google Oneindia Kannada News

ನವದೆಹಲಿ : ಮೂತ್ರಕೋಶದಲ್ಲಿನ ಕಲ್ಲುಗಳ ತೊಂದರೆಯಿಂದ ಬಳಲುತ್ತಿದ್ದ ರಾಷ್ಟ್ರಪತಿ ಕೆ.ಆರ್‌. ನಾರಾಯಣನ್‌ ಅವರಿಗೆ ಗುರುವಾರ ಬೆಳಿಗ್ಗೆ ಗಂಗಾರಾಂ ಆಸ್ಪತ್ರೆಯಲ್ಲಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ.

ಡಾ. ಪ್ರದೀಪ್‌ ಚೌಬೆ ನೇತೃತ್ವದ ವೈದ್ಯರ ತಂಡ ನಡೆಸಿದ ಶಸ್ತ್ರ ಚಿಕಿತ್ಸೆ ಸಂಪೂರ್ಣ ಯಶಸ್ವಿಯಾಗಿದ್ದು , ನಾರಾಯಣನ್‌ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

ಇನ್ನೂ ಎರಡು ದಿನಗಳ ಕಾಲ ನಾರಾಯಣನ್‌ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯ್ತುತಾರೆಂದು ಊಹಿಸಲಾಗಿದೆ. ಪ್ರಸ್ತುತ ಅವರು ವೈದ್ಯರ ಸಲಹೆಯ ಮೇರೆಗೆ ಯಾವುದೇ ಸಂದರ್ಶಕರನ್ನು ಭೇಟಿ ಮಾಡುತ್ತಿಲ್ಲ .

(ಯುಎನ್‌ಐ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X