Get Updates
Get notified of breaking news, exclusive insights, and must-see stories!

ಮಹಾವೀರ- 2600 : ಕೇಂದ್ರದಿಂದವರ್ಷವಿಡೀ ಕಾರ್ಯಕ್ರಮ

ನವದೆಹಲಿ : ಭಗವಾನ್‌ ಮಹಾವೀರ ನಿರ್ವಾಣದ 2,600ನೇ ವಾರ್ಷಿಕೋತ್ಸವವನ್ನು ಈ ವರ್ಷವಿಡೀ ಆಚರಿಸಲು ಕೇಂದ್ರ ಸಂಸ್ಕೃತಿ ಸಚಿವಾಲಯ ನಿರ್ಧರಿಸಿದೆ ಎಂದು ಕೇಂದ್ರ ಪ್ರವಾಸೋದ್ಯಮ ಖಾತೆ ಸಚಿವ ಅನಂತ್‌ ಕುಮಾರ್‌ ತಿಳಿಸಿದ್ದಾರೆ.

ಶುಕ್ರವಾರದ ಸುದ್ದಿಗೋಷ್ಠಿಯಲ್ಲಿ ಈ ವಿಷಯವನ್ನು ತಿಳಿಸಿದ ಸಚಿವರು, ವರ್ಷಪೂರ್ತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಒಂದು ಕೋಟಿ ರೂಪಾಯಿ ನಿಧಿಯನ್ನು ತೆಗೆದಿರಿಸಿದೆ. ಏಪ್ರಿಲ್‌ ಆರರಿಂದ ವಾರ್ಷಿಕೋತ್ಸವದ ಕಾರ್ಯಕ್ರಮಗಳು ಆರಂಭವಾಗುತ್ತವೆ. ಅಂದು ದೆಹಲಿಯ ಇಂದಿರಾಗಾಂಧಿ ಒಳಾಂಗಣ ಕ್ರೀಡಾಂಗಣದಲ್ಲಿ ಮಹಾವೀರ ನಿರ್ವಾಣ ಉತ್ಸವದ ವಾರ್ಷಿಕ ಸರಣಿ ಕಾರ್ಯಕ್ರಮವನ್ನು ಪ್ರಧಾನಿ ವಾಜಪೇಯಿ ಉದ್ಘಾಟಿಸಲಿದ್ದಾರೆ. ವಾರ್ಷಿಕೋತ್ಸವದ ರಾಷ್ಟ್ರೀಯ ಸಮಿತಿಯಲ್ಲಿ ರಾಜ್ಯದ ಪ್ರತಿನಿಧಿಯಾಗಿ ಧರ್ಮಸ್ಥಳದ ವೀರೇಂದ್ರ ಹೆಗ್ಗಡೆ ಇರುತ್ತಾರೆ ಎಂದು ಸಚಿವರು ಹೇಳಿದರು.

ಪ್ರತಿ ವರ್ಷ ಏಪ್ರಿಲ್‌ ಆರನ್ನು ಅಹಿಂಸಾ ದಿನವನ್ನಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಅಂದು ರಾಷ್ಟ್ರಾದ್ಯಂತ ಪ್ರಾಣಿ ವಧೆಯನ್ನು ನಿಷೇಧಿಸಲಾಗುವುದು. ಜೈೖನ ಸಿದ್ಧಾಂತವನ್ನು ಪ್ರತಿನಿಧಿಸುವ ವಿಶ್ವ ಮಟ್ಟದ ವಸ್ತು ಪ್ರದರ್ಶನವನ್ನು ಬೆಂಗಳೂರು, ದೆಹಲಿ, ಹೈದರಾಬಾದ್‌, ಚೈನ್ನೈ, ಮತ್ತು ಕಲ್ಕತ್ತಾದಲ್ಲಿ ಆಯೋಜಿಸಲಾಗುವುದು ಎಂದು ಅನಂತ್‌ ವಿವರಿಸಿದರು.

ಗ್ರಾಮೀಣಾಭಿವೃದ್ಧಿ ಮತ್ತು ನಗರಾಭಿವೃದ್ಧಿ ಮಂತ್ರಾಲಯದ ನೆರವಿನೊಂದಿಗೆ ಜಿಲ್ಲೆಗೊಂದು ಮಾದರಿ ಹಳ್ಳಿಯನ್ನು ರಚಿಸಲಾಗುವುದು. ತೀರ್ಥಂಕರ ಮಹಾವೀರನ ನಿರ್ವಾಣ ವರ್ಷದ ಆಚರಣೆಗೆ ರಾಜ್ಯ ಸಮಿತಿಗಳನ್ನು ರಚಿಸಿಕೊಳ್ಳುವಂತೆ ಪ್ರತಿ ರಾಜ್ಯಗಳಿಗೆ ಪತ್ರ ಬರೆಯಲಾಗಿದೆ ಎಂದು ಅನಂತ್‌ ಕುಮಾರ್‌ ಹೇಳಿದರು.

(ಇನ್ಫೋ ವಾರ್ತೆ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+