ಟೆಕ್ನಾಲಜಿಕಲ್ ಸ್ಟಾರ್ಟ್ಅಪ್ಸ್ : ಕೆನರಾಬ್ಯಾಂಕ್-ಮ್ಯಾನ್ಹಠನ್ ಒಪ್ಪಂದ
ಬೆಂಗಳೂರು : ಕೆನರಾಬ್ಯಾಂಕ್ನ ವೆಂಚರ್ ಕ್ಯಾಪಿಟಲ್ ವಿಭಾಗವು ಭಾರತದಲ್ಲಿ ಟೆಕ್ನಾಲಜಿಕಲ್ ಸ್ಟಾರ್ಟ್ಅಪ್ಸ್ಗಳಿಗೆ ಅರ್ಥಿಕ ನೆರವು ನೀಡುವ 25 ದಶಲಕ್ಷ ಡಾಲರ್ ಉದ್ದೇಶಿತ ಯೋಜನೆಗೆ ಅಮೆರಿಕದ ಚೇಸ್ ಮ್ಯಾನ್ಹಠನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
ಈ ಹಿಂದಿನ ಮೂರು ಆರ್ಥಿಕ ನೆರವು ಯೋಜನೆಗಳೂ ಯಶಸ್ವಿಯಾಗಿದ್ದು, ನಾಲ್ಕನೇ ಹಂತದ ಯೋಜನೆಗೆ ಪ್ರೋತ್ಸಾಹ ನೀಡಿದೆ. ಈ ವಿಷಯವನ್ನು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಆರ್.ಜೆ. ಕಾಮತ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಬ್ಯಾಂಕ್ ಕಳೆದ ವರ್ಷ 11 ಸಾವಿರ ಕೋಟಿ ರುಪಾಯಿಗಳ ಠೇವಣಿ ಸಂಗ್ರಹಿಸಿ ಶೇ. 23ರಷ್ಟು ಪ್ರಗತಿ ಸಾಧಿಸಿದೆ ಎಂದೂ ಅವರು ಹೇಳಿದರು.
ಬ್ಯಾಂಕಿನ 95 ವರ್ಷಗಳ ಸುದೀರ್ಘ ಇತಿಹಾಸದಲ್ಲಿಯೇ ಅತಿ ಹೆಚ್ಚು ಠೇವಣಿ ಸಂಗ್ರಹ ಇದಾಗಿದೆ ಎಂದು ಅವರು ಹೇಳಿದರು. ಮಾರ್ಚ್ 31ಕ್ಕೆ ಕೊನೆಗೊಂಡ ಕಳೆದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ ಒಟ್ಟು 87 ಸಾವಿರ ಕೋಟಿ ರುಪಾಯಿ ವಹಿವಾಟು ನಡೆಸಿ, ಶೇ. 21ರಷ್ಟು ಪ್ರಗತಿ ಸಾಧಿಸಿದೆ. ಬ್ಯಾಂಕ್ನ ವಿದೇಶೀ ವ್ಯವಹಾರ ಮಾರ್ಚ್ ಅಂತ್ಯಕ್ಕೆ 60 ಸಾವಿರ ಕೋಟಿ ರುಪಾಯಿಗಳಾಗಿತ್ತು ಎಂದೂ ಕಾಮತ್ ತಿಳಿಸಿದರು.
ಕಳೆದ ಆರ್ಥಿಕ ವರ್ಷದಲ್ಲಿ ಬ್ಯಾಂಕ್ 4 ಸಾವಿರದ 500 ಕೋಟಿ ರುಪಾಯಿ ಸಾಲ ನೀಡುವ ಮೂಲಕ ಹೊಸ ದಾಖಲೆ ಸೃಷ್ಟಿಸಿದೆ. ಸ್ವಯಂ ನಿವೃತ್ತಿ ಯೋಜನೆಯ ಅಡಿಯಲ್ಲಿ 8000 ಬ್ಯಾಂಕ್ ನೌಕರರು ನಿವೃತ್ತರಾಗುತ್ತಿದ್ದಾರೆ. ಬ್ಯಾಂಕ್ 2,404 ಶಾಖೆಗಳನ್ನು ಹೊಂದಿದ್ದು, ಇದರಲ್ಲಿ 173 ವಿಶೇಷ ಬ್ರಾಂಚ್ಗಳಿವೆ ಎಂದೂ ಅವರು ಹೇಳಿದರು.
ನೂರು ಕೋಟಿ ರುಪಾಯಿ ಸಂಗ್ರಹದ ಉದ್ದೇಶದೊಂದಿಗೆ ಬ್ಯಾಂಕ್ ಬರುವ ನವೆಂಬರ್ 15ರೊಳಗೆ ಷೇರು ಮಾರುಕಟ್ಟೆ ಪ್ರವೇಶಿಸಲಿದೆ ಎಂದೂ ಅವರು ಹೇಳಿದರು. (ಯು.ಎನ್.ಐ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications