ಹೆಣ್ಣು ಮಕ್ಕಳ ಮಾರಾಟ : ಸಮಗ್ರ ತನಿಖೆ ನಡೆಸಲು ಸೂಚನೆ
ಬೆಂಗಳೂರು : ಚಿಂಚೋಳಿ ತಾಲೂಕಿನ ಕೆಲವು ತಾಂಡಾಗಳಲ್ಲಿ ಹೆಣ್ಣುಮಕ್ಕಳ ಮಾರಾಟ ನಡೆದಿರುವ ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಲು ಗುಲ್ಬರ್ಗಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ವಿಷಯವನ್ನು ರಾಜ್ಯ ಸಮಾಜ ಕಲ್ಯಾಣ ಸಚಿವ ಕಾಗೋಡು ತಿಮ್ಮಪ್ಪ ಮಂಗಳವಾರ ಇಲ್ಲಿ ತಿಳಿಸಿದರು.
ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಲಂಬಾಣಿ ತಾಂಡಾಗಳ 19 ಹೆಣ್ಣು ಮಕ್ಕಳ ಮಾರಾಟ ನಡೆದಿದ್ದು, ಈ ಪೈಕಿ ಮೂರು ಮಕ್ಕಳನ್ನು ಪತ್ತೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಲಂಬಾಣಿ ತಾಂಡಾಗಳಿಗೆ ಖುದ್ದು ಭೇಟಿ ನೀಡಿ, ವಿಚಾರಣೆ ನಡೆಸಿ ರಾಜಧಾನಿಗೆ ವಾಪಸಾದ ಸಚಿವರು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು.
ಈ ಮಕ್ಕಳನ್ನು ಚಿಂಚೋಳಿ ಬಳಿಯ ಆಂಧ್ರಪ್ರದೇಶದ ತಾಂಡಾಪುರದಲ್ಲಿರುವ ಜಾನ್ ಅಬ್ರಾಹಾಂ ಮೆಮೋರಿಯಲ್ ಹೌಸ್ಗೆ ಮಾರಲಾಗಿದೆ. ಈ ಸಂಬಂಧ ಮೊಕದ್ದಮೆ ದಾಖಲಿಸಿಕೊಂಡಿರುವಿರಾ ಎಂದು ಪತ್ರಕರ್ತರು ಕೇಳಿದಾಗ, ವಿಚಾರಣೆ ಪೂರ್ಣಗೊಂಡ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದೂ ಸಚಿವರು ತಿಳಿಸಿದರು.
ಪಾಲಕರು ತಮ್ಮ ಮಕ್ಕಳನ್ನು ಮಾರಾಟ ಮಾಡಲು ಕಡು ಬಡತನವೂ ಒಂದು ಕಾರಣವಾಗಿದ್ದು, ಕೆಲವು ಸೂಲಗಿತ್ತಿಯರು ಕೂಡ ಈ ಮಾರಾಟ ಜಾಲದಲ್ಲಿ ಸೇರಿದ್ದಾರೆ ಎಂದು ವರದಿಗಳಿಂದ ತಿಳಿದುಬಂದಿದೆ ಎಂದೂ ಅವರು ಹೇಳಿದರು.
(ಯು.ಎನ್.ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications