ನರ್ಮದೆಯ ಮಗಳು ಮೇಧಾ ಪಾಟ್ಕರ್ಗೆಬಸವ ಶ್ರೀ ಪ್ರಶಸ್ತಿ
ಚಿತ್ರದುರ್ಗ : ಪ್ರಸಿದ್ಧ ಪರಿಸರವಾದಿ ಹಾಗೂ ನರ್ಮದಾ ಬಚಾವ್ ಆಂದೋಲನದ ನಾಯಕಿ ಮೇಧಾ ಪಾಟ್ಕರ್ ಅವರನ್ನು ಮುರುಘರಾಜೇಂದ್ರ ಬೃಹನ್ಮಠ ನೀಡುವ ಪ್ರತಿಷ್ಠಿತ ಬಸವ ಶ್ರೀ ಪ್ರಶಸ್ತಿ ಗೆ ಆಯ್ಕೆ ಮಾಡಲಾಗಿದೆ.
ಮುರುಘ ರಾಜೇಂದ್ರ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘರಾಜೇಂದ್ರ ಶರಣರ ಅಧ್ಯಕ್ಷತೆಯ ಬಸವ ಶ್ರೀ ಪ್ರಶಸ್ತಿ ಆಯ್ಕೆ ಸಮಿತಿ, ಈ ವರ್ಷದ ಪ್ರಶಸ್ತಿಗಾಗಿ ಮೇಧಾ ಪಾಟ್ಕರ್ ಅವರನ್ನು ಆಯ್ಕೆ ಮಾಡಿದೆ. ಮೇ 5 ರಂದು ಪ್ರಶಸ್ತಿ ಪ್ರದಾನ ಸಮಾರಂಭ, ಚಿತ್ರದುರ್ಗದ ಮುರುಘಾ ವನದಲ್ಲಿ ನಡೆಯುವುದು ಎಂದು ಮುರುಘರಾಜೇಂದ್ರ ಶರಣರು ತಿಳಿಸಿದ್ದಾರೆ.
ಪ್ರಶಸ್ತಿಯು, ಒಂದು ಲಕ್ಷ ರೂಪಾಯಿ ನಗದು ಮತ್ತು ತಾಮ್ರ ಪತ್ರವನ್ನೊಳಗೊಂಡಿರುತ್ತದೆ. ಮೇಧಾ ಪಾಟ್ಕರ್ ಅವರು ನರ್ಮದಾ ಬಚಾವ್ ಜನಾಂದೋಲನದ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ತಮ್ಮ ಒಡನಾಡಿಗಳೊಂದಿಗೆ ಈ ಪ್ರಶಸ್ತಿಯನ್ನು ಸ್ವೀಕರಿಸುವುದಾಗಿ ಹೇಳಿದ್ದಾರೆ.
ಕಳೆದ ಒಂದುವರೆ ದಶಕದಿಂದ ನರ್ಮದಾ ಅಟೆಕಟ್ಟು ಕಾಮಗಾರಿಯಿಂದಾಗಿ ನಿರ್ವಸಿತರಾಗಿರುವ ಆದಿವಾಸಿಗಳ ಪುನರ್ವಸತಿಗಾಗಿ ಮೇಧಾ ಹೋರಾಡುತ್ತಿದ್ದಾರೆ. ಮೂರು ರಾಜ್ಯಗಳ ಮೂಲಕ ಹಾದು ಹೋಗುವ ನರ್ಮದಾ ನದಿಗೆ ಸುಮಾರು 30 ಬೃಹತ್ ಅಣೆಕಟ್ಟು, 135 ಮಧ್ಯಮ ಅಟೆಕಟ್ಟು ಹಾಗೂ 3000ಕ್ಕೂ ಹೆಚ್ಚು ಸಣ್ಣ ಅಣೆಕಟ್ಟುಗಳನ್ನು ನಿರ್ಮಿಸುವ ಯೋಜನೆಯಿಂದಾಗಿ 245 ಹಳ್ಳಿಗಳು ನೆಲೆ ಕಳೆದುಕೊಳ್ಳುತ್ತವೆ. ನಿರ್ವಸಿತರ ಪರವಾಗಿ ಹೋರಾಡಿದ ಮೇಧಾ ಪಾಟ್ಕರ್ಗೆ ಈ ಬಾರಿಯ ಬಸವ ಶ್ರೀ ಪ್ರಶಸ್ತಿ ನೀಡುವುದು ಸೂಕ್ತ ಎಂದು ಆಯ್ಕೆ ಸಮಿತಿ ನಿರ್ಧರಿಸಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications