ಬೀಡಿ ಸೇದುವಾಗ ಗಾಡಿ ಓಡಿಸಬಾರದುಎಂದು ಕರ್ನಾಟಕ ಸರ್ಕಾರ
ಬೆಂಗಳೂರು : ಓದುವಾಗ ಓದಬೇಕು, ಆಡುವಾಗ ಆಡಬೇಕು, ಎರಡು ಕೆಲಸವನ್ನೂ ಒಟ್ಟಿಗೆ ಮಾಡಬಾರದು ಎಂದು ಹಿರಿಯರು ಹೇಳುತ್ತಿದ್ದುದು ನಿಮಗೂ ನೆನಪಿರಬಹುದು. ಈಗ ಅದೇ ರೀತಿಯ ಮಾತನ್ನೇ ರಾಜ್ಯದ ಸಾರಿಗೆ ಸಚಿವರೂ ಶಾಸನಬದ್ಧವಾಗಿ ಹೇಳುತ್ತಿದ್ದಾರೆ. ವಾಹನ ಓಡಿಸುವಾಗ ಮೊಬೈಲ್ ಫೋನ್ ಬಳಸಬಾರದು ಎಂದು ಕಳೆದ ತಿಂಗಳು ಆದೇಶಿಸಿದ್ದ ಸಚಿವರು, ಈಗ ವಾಹನ ಚಲಿಸುವಾಗ ಬೀಡಿ, ಸಿಗರೇಟ್ ಸೇದುವುದನ್ನೂ ನಿಷೇಧಿಸುತ್ತಿದ್ದಾರೆ.
ವಾಹನ ಚಲಿಸುವಾಗ ಫೋನ್ನಲ್ಲಿ ಮಾತಾಡುವುದರಿಂದ ಚಾಲಕನ ಏಕಾಗ್ರತೆಗೆ ಭಂಗ ಉಂಟಾಗಿ ಅಪಘಾತವಾಗುತ್ತದೆ ಎನ್ನುವ ಕಾರಣವನ್ನೇ ಸಿಗರೇಟ್ ನಿಷೇಧಕ್ಕೂ ನೀಡಲಾಗಿದೆ. ವಾಹನ ಚಲಿಸುವಾಗ ಚಾಲಕರು ಒಂದು ಕೈಯಲ್ಲಿ ಸಿಗರೇಟ್ ಹಿಡಿದು ಕೇವಲ ಒಂದೇ ಕೈಯಲ್ಲಿ ವಾಹನ ಓಡಿಸುವುದರಿಂದ ಅಪಘಾತಗಳು ಸಂಭವಿಸುತ್ತವೆ ಎಂಬುದು ಅಧ್ಯಯನದಿಂದ ತಿಳಿದುಬಂದಿದೆ.
ಈ ಅಧ್ಯಯನ ವರದಿಯ ಹಿನ್ನೆಲೆಯಲ್ಲಿ ವಾಹನ ಚಲಿಸುವಾಗ ಧೂಮಪಾನ ನಿಷೇಧವನ್ನು ಕಡ್ಡಾಯ ಮಾಡಲು ಸಚಿವರು ಆದೇಶ ಹೊರಡಿಸುವ ನಿರ್ಧಾರ ಪ್ರಕಟಿಸಿದ್ದಾರೆ. ಆದೇಶ ಜಾರಿಗೆ ಬಂದ ತರುವಾಯ ಸಿಗರೇಟ್, ಬೀಡಿ ಸೇದುತ್ತಾ ವಾಹನ ಓಡಿಸುವವರು ಪೊಲೀಸರಿಗೆ ಸಿಕ್ಕಿ ಬಿದ್ದರೆ ದಂಡ ಕಟ್ಟಲು ಜೇಬು ತುಂಬ ಹಣ ಇಟ್ಟುಕೊಳ್ಳುವುದು ಅನಿವಾರ್ಯವಾಗುತ್ತದೆ.
ಈ ವಿಷಯವನ್ನು ಇಲ್ಲಿ ನಡೆದ ಉನ್ನತ ಮಟ್ಟದ ಸಭೆಯ ನಂತರ ಸಾರಿಗೆ ಸಚಿವ ಸಗೀರ್ ಅಹಮದ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ. ಒಟ್ಟಿನಲ್ಲಿ ಧೂಮಪ್ರಿಯರಿಗೆ ಟೈಮ್ ಚೆನ್ನಾಗಿಲ್ಲ . ಬಸ್ನಲ್ಲಿ , ಸಾರ್ವಜನಿಕ ಸ್ಥಳದಲ್ಲಿ ಬೀಡಿ, ಸಿಗರೇಟ್ ಸೇದುವಂತಿಲ್ಲ. ವಾಹನ ಓಡಿಸುವಾಗ ಓಪನ್ ಏರ್ನಲ್ಲಿ ಧೂಮಸೇವನೆಗೂ ಸಂಚಕಾರ. ಈ ಮಧ್ಯೆ ಬೆಲೆ ಏರಿಕೆಯ ಬಿಸಿ. ಒಟ್ಟಿನಲ್ಲಿ ಎಲ್ಲ ರೀತಿಯಲ್ಲೂ ಬಿಡಿ ಸಿಗರೇಟ್ ಸೇದುವವರನ್ನೇ ಸುಡುತ್ತಿದೆ.
ವಾರ್ತಾಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications