ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾದ ಹೆಂಚಿನ ಮೇಲೆ ನಾಲ್ಕಾರು ಹನಿ

By Staff
|
Google Oneindia Kannada News

ಬೆಂಗಳೂರು : ಬಿಸಿಲಿನಿಂದ ಕಾದು ಕೆಂಪಗಾಗಿದ್ದ ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆ ಬಿದ್ದಿದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಚದುರಿದಂತೆ ಮಳೆ ಆಗಿದೆ. ಕರಾವಳಿ ಕರ್ನಾಟಕದಲ್ಲಿ ಒಣಹವೆ ಮುಂದುವರಿದಿದೆ. ಮುಂಡರಗಿಯಲ್ಲಿ 5 ಸೆಂಟಿ ಮೀಟರ್‌, ರಾಯಚೂರು, ಹೊಳಲ್ಕೆರೆಗಳಲ್ಲಿ 4, ಲಕ್ಷ್ಮೇಶ್ವರದಲ್ಲಿ 3, ಮಸ್ಕಿಯಲ್ಲಿ 2, ಸೇಡಂ, ಹಾರಂಗಿ, ಗದಗ್‌, ಚಿತ್ರದುರ್ಗದಲ್ಲಿ ತಲಾ 1 ಸೆಂಟಿ ಮೀಟರ್‌ ಮಳೆ ಬಿದ್ದಿದೆ.

ರಾಜ್ಯದ ಅತಿ ಹೆಚ್ಚು ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ ಗುಲ್ಬರ್ಗಾದಲ್ಲಿ ದಾಖಲಾಗಿದೆ. ಮುನ್ಸೂಚನೆಯ ರೀತ್ಯ ಒಳನಾಡಿನ ಅನೇಕ ಕಡೆಗಳಲ್ಲಿ ಚದುರಿದಂತೆ ಮಳೆ ಅಥವಾ ಗುಡುಗಿನಿಂದ ಕೂಡಿದ ಸುರಿಮಳೆ ಬೀಳುವ ಸಂಭವ ಇದೆ. ಉಳಿದಂತೆ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭಾಗಶಃ ಮೋಡ ಇದ್ದು, ಸಂಜೆ ಅಥವಾ ರಾತ್ರಿ ಒಂದೆರಡು ವರಸೆ ಮಳೆ ಆಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್‌ ಇರಲಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X