ದುರ್ಬಲ ವರ್ಗದ ಪರವಾಗಿ ದನಿ ಎತ್ತಿದ ಬಾಬು ಜಗಜೀವನರಾಂ
ಬೆಂಗಳೂರು : ಹಿಂದುಳಿದ ಹಾಗೂ ಬಡ ಪಂಗಡಗಳ ಜನತೆಯ ಏಳಿಗೆಗೆ ದುಡಿದವರಲ್ಲಿ ಮಾಜಿ ಉಪ ಪ್ರಧಾನಿ ಬಾಬು ಜಗಜೀವನರಾಂ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ಪ್ರಮುಖರು ಎಂದು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹೇಳಿದ್ದಾರೆ.
ಯಶಸ್ವಿ ಹಸಿರು ಕ್ರಾಂತಿಯಲ್ಲೂ ಜಗಜೀವನ ರಾಂ ಅವರು , ಮಾಜಿ ಕೇಂದ್ರ ಸಚಿವ ಸಿ. ಸುಬ್ರಹ್ಮಣ್ಯಂ ಅವರೊಂದಿಗೆ ಕೂಡಿ ಮಹತ್ವದ ಸೇವೆ ಸಲ್ಲಿಸಿದ್ದರು ಎಂದು ಕೃಷ್ಣ ಅಭಿಪ್ರಾಯಪಟ್ಟರು. ಗುರುವಾರ ನಡೆದ ಜಗಜೀವನರಾಂ ಅವರ 94 ಜಯಂತಿ ಆಚರಣೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು. ಸಂಪುಟ ಸಹೋದ್ಯೋಗಿಗಳು ಹಾಗೂ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಕೆ.ಎಚ್. ಶ್ರೀನಿವಾಸ್ ಸಮಾರಂಭದಲ್ಲಿ ಹಾಜರಿದ್ದರು.
ಜಗಜೀವನರಾಂ ನಿಜವಾದ ಭಾರತ ರತ್ನ . ಅಧಿಕಾರದಲ್ಲಿರಲಿ ಇಲ್ಲದಿರಲಿ ಎಲ್ಲರಿಂದಲೂ ಗೌರವ ಪಡೆದಿದ್ದ ವ್ಯಕ್ತಿತ್ವ ಅವರದು. ಅವರನ್ನು ಲೋಕಮಾನ್ಯ ತಿಲಕರೊಂದಿಗೆ ಹೋಲಿಸಬಹುದು ಎಂದು ಶ್ರೀನಿವಾಸ್ ಬಣ್ಣಿಸಿದರು. ದುರ್ಬಲ ವರ್ಗದವರಿಗೆ ಶಿಕ್ಷಣ ಕಲ್ಪಿಸುವುದು, ಆ ಮೂಲಕ ಮೂಢ ನಂಬಿಕೆಗಳ ಬಗೆಗೆ ಅವರಲ್ಲಿ ಜಾಗೃತಿ ಮೂಡಿಸುವ ಬಾಬು ಅವರ ಪ್ರಯತ್ನಗಳನ್ನು ಗೃಹ ಸಚಿವ ಮಲ್ಲಿಕಾರ್ಜುನ ಖರ್ಗೆ ಸ್ಮರಿಸಿದರು.
(ಯುಎನ್ಐ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications