ಮೈಸೂರು : ಜಗಜೀವನರಾಂ ಜಯಂತಿಯಲ್ಲಿ ಘರ್ಷಣೆ, ಲಾಠಿ ಪ್ರಹಾರ
ಮೈಸೂರು : ಇಲ್ಲಿನ ಪುರಭವನದಲ್ಲಿ ನಡೆದ ಮಾಜಿ ಉಪಪ್ರಧಾನಿ ದಿವಂಗತ ಜಗಜೀವನ ರಾಮ್ ಅವರ 94ನೇ ಜಯಂತಿಯ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆ ಹಾಗೂ ಹಿಂಸಾಚಾರ ತಡೆಯಲು ಪೊಲೀಸರು ಹಲವು ಬಾರಿ ಲಾಠಿ ಚಾರ್ಚ್ ಮಾಡಿದ ಘಟನೆ ಗುರುವಾರ ನಡೆದಿದೆ.
ಈ ಗುಂಪು ಘರ್ಷಣೆಯಲ್ಲಿ ಒಬ್ಬರಿಗೆ ಚಾಕುವಿನಿಂದ ಇರಿದು ಗಾಯಗೊಳಿಸಲಾಗಿದೆ. ಮತ್ತಿಬ್ಬರು ಗಾಯಗೊಂಡಿದ್ದಾರೆ. ಚೂರಿ ಇರಿತದಿಂದ ಗಾಯಗೊಂಡಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಮೈನರ್ ಆಪರೇಷನ್ ಮಾಡಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ ಕಾರ್ಯಕ್ರಮಕ್ಕೆ ತಮಗೆ ಆಹ್ವಾನ ನೀಡಿಲ್ಲ ಎಂಬ ಕಾರಣಕ್ಕಾಗಿ ಉಂಟಾದ ಕೂಗಾಟದಲ್ಲಿ ಸಿದ್ಧರಾಜು ಅವರ ವಿರುದ್ಧ ಘೋಷಣೆ ಕೂಗಿದ್ದೇ ಈ ಗೊಂದಲಕ್ಕೆ ಕಾರಣವಾಯಿತು. ಆಗಿ ಹೋದ ಪ್ರಮಾದಕ್ಕೆ ಪಾಲಿಕೆ ಅಧಿಕಾರಿ ಕ್ಷಮೆ ಕೋರಿದ ಬಳಿಕ ಕಾರ್ಯಕ್ರಮ ಜರುಗಿತು. ಘೋಷಣೆ ಕೂಗುತ್ತಿದ್ದವನ್ನು ಹೊರಗೆ ಹೋಗುವಂತೆ ಮತ್ತೊಂದು ಗುಂಪಿನವರು ಹೇಳಿದ್ದು ಘರ್ಷಣೆಗೆ ಇಂಬು ನೀಡಿತು. ಇದೇ ಸಂದರ್ಭದಲ್ಲಿ ವ್ಯಕ್ತಿಯಾಬ್ಬರಿಗೆ ಚಾಕುವಿನಿಂದ ಇರಿಯಲಾಯಿತು.
ಈ ಹಿನ್ನೆಲೆಯಲ್ಲಿ ಕೆಲವರು ಕಲ್ಲು ತೂರಾಟದಲ್ಲಿ ತೊಡಗಿ, ರಸ್ತೆ ಬಂದ್ ಮಾಡಿದರು. ಇದರಿಂದಾಗಿ ಸಂಚಾರ ಕೆಲ ಕಾಲ ಅಸ್ತವ್ಯಸ್ತವಾಗಿತ್ತು. ಕೆ.ಆರ್. ಆಸ್ಪತ್ರೆಯ ವಲಯದಲ್ಲಿ ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಹಂತದಲ್ಲಿ ಗಲಭೆಯನ್ನು ನಿಯಂತ್ರಿಸಲು ಪೊಲೀಸರು ಬೆತ್ತ ಪ್ರಹಾರ ಮಾಡಬೇಕಾಯಿತು. ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
(ಯು.ಎನ್.ಐ, ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications