ಭೂಕಂಪ ಸಂತ್ರಸ್ತರ ನೆರವಿಗೆ 200 ಕೋಟಿ ರು. ಒಪ್ಪಿಸಿದ ಕ್ಲಿಂಟನ್
ಅಂಜಾರ್ : ಅಮೆರಿಕ- ಭಾರತ ಪ್ರತಿಷ್ಠಾನ ಗುಜರಾತ್ ಭೂಕಂಪ ಸಂತ್ರಸ್ತರಿಗಾಗಿ ಸಂಗ್ರಹಿಸಿದ ಸುಮಾರು 200 ಕೋಟಿ ರುಪಾಯಿ ನಿಧಿಯನ್ನು ಅಮೆರಿಕಾದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ಬುಧವಾರ ಗುಜರಾತ್ ಸರ್ಕಾರಕ್ಕೆ ಒಪ್ಪಿಸಿದರು.
ಭೂಕಂಪದಿಂದ ತೀವ್ರ ಘಾಸಿಗೊಂಡಿರುವ ಭುಜ್, ರತ್ನಾಲ್ ಹಾಗೂ ಅಂಜಾರ್ ಪ್ರದೇಶಗಳಿಗೆ ಭೇಟಿ ಕೊಟ್ಟ ಕ್ಲಿಂಟನ್, ಸಂತ್ರಸ್ತರ ನೋವಿನೊಂದಿಗೆ ಭಾಗಿಯಾದರು. ಅವರ ಬದುಕನ್ನು ಪುನರ್ ರೂಪಿಸುವ ಉದ್ದೇಶದಿಂದ ಶಿಕ್ಷಣ ಹಾಗೂ ಉದ್ಯೋಗಾವಾಕಾಶಗಳನ್ನುಳ್ಳ ಯೋಜನೆಯಾಂದನ್ನು ರೂಪಿಸುವುದಾಗಿ ಭರವಸೆ ನೀಡಿದ ಕ್ಲಿಂಟನ್, ಸರ್ಕಾರೇತರ ಸಂಘಟನೆಗಳೊಂದಿಗೆ ಸಂತ್ರಸ್ತರ ಪುನರ್ವಸತಿಗೆ ಸಮಗ್ರ ಯೋಜನೆ ರೂಪಿಸುವ ಬಗೆಗೆ ಚರ್ಚಿಸುವುದಾಗಿ ಭರವಸೆ ನೀಡಿದರು.
ದುರಂತದಲ್ಲಿ ಮಡಿದವರ ಗೌರವಾರ್ಥ ಕ್ಲಿಂಟನ್ ಒಂದು ನಿಮಿಷ ಕಾಲ ಮೌನ ಆಚರಿಸಿದರು. ಆವರೊಂದಿಗೆ 40 ಮಂದಿಯ ಅನಿವಾಸಿ ಭಾರತೀಯ ನಿಯೋಗವೂ ಆಗಮಿಸಿತ್ತು . ಗಣರಾಜ್ಯೋತ್ಸವ ದಿನದಂದು ಕವಾಯತು ನಡೆಸುತ್ತಿದ್ದ 300 ಮಕ್ಕಳು ಭೂಸಮಾಧಿಯಾದ ಸ್ಥಳಕ್ಕೆ ಭೇಟಿ ಕೊಟ್ಟ ಕ್ಲಿಂಟನ್, ಮಕ್ಕಳ ಸಮಾಧಿಗೆ ಗುಲಾಬಿ ಗುಚ್ಛವಿರಿಸಿ ನಮಿಸಿದರು.
ಕ್ಲಿಂಟನ್ ಅವರನ್ನು ನೋಡಲು ನೆರೆದಿದ್ದ ಕುತೂಹಲಿಗಳ ಸಂಖ್ಯೆ ಹೆಚ್ಚಾಗಿತ್ತು . ಒಂದು ಹಂತದಲ್ಲಿ ಜನರ ಕೂಗಾಟ ಹೆಚ್ಚಾದಾಗ, ಪೊಲೀಸರು ಬೆತ್ತ ಪ್ರಹಾರ ನಡೆಸಿದರು. ಕಾರಿನಲ್ಲಿ ಕೂತೇ ಜನರತ್ತ ಕೈ ಬೀಸಿದ ಅಮೆರಿಕಾದ ಮಾಜಿ ಅಧ್ಯಕ್ಷರು, ನಾನು ಮತ್ತೊಮ್ಮೆ ಭಾರತಕ್ಕೆ ಬರುವೆ. ಜೀವಿತಾವಧಿಯನ್ನು ಇಲ್ಲಿಯೇ ಕಳೆಯಲು ಬಯಸಿದ್ದೇನೆ ಎಂದರು.
(ಇನ್ಫೋ ವಾರ್ತೆ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications