ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶನಿವಾರ ಸಂಜೆ ಮಾಜಿ ಉಪಪ್ರಧಾನಿ ದೇವಿಲಾಲ್‌ ಅವರ ಅಂತ್ಯಕ್ರಿಯೆ

By Staff
|
Google Oneindia Kannada News

ನವದೆಹಲಿ : ಮಾಜಿ ಉಪ ಪ್ರಧಾನಿ, ಭಾರತದ ಹಿರಿಯ ರಾಜಕಾರಣಿ ದೇವಿಲಾಲ್‌ ಅವರು ದೀರ್ಘಕಾಲದ ಅಸ್ವಸ್ಥತೆಯ ನಂತರ ಶುಕ್ರವಾರ ಸಂಜೆ ನಿಧನಾರಾದರು.

ದೇವಿಲಾಲ್‌ ಅವರಿಗೆ 86 ವರ್ಷ ವಯಸ್ಸಾಗಿದ್ದು, ಹೃದಯದ ತೊಂದರೆಯಿಂದ ಬಳಲುತ್ತಿದ್ದರು. ಕಳೆದ ವಾರ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಅವರು, ಹರ್ಯಾಣ ಮುಖ್ಯಮಂತ್ರಿ ಓಂ ಪ್ರಕಾಶ್‌ ಚೌಟಾಲ ಮತ್ತು ಮಾಜಿ ಸಂಸತ್‌ ಸದಸ್ಯ ರಂಜಿತ್‌ ಸಿಂಗ್‌ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದಾರೆ.

ರೈತ ಹೋರಾಟದ ಮುಂಚೂಣಿಯಲ್ಲಿದ್ದ ದೇವಿಲಾಲ್‌ ಅವರು ‘ತಾವು’ ಎಂದೇ ಜನಪ್ರಿಯರಾಗಿದ್ದರು. ಮೃತರ ಅಂತ್ಯಕ್ರಿಯೆ ಶನಿವಾರ ಸಂಜೆ ನಾಲ್ಕು ಗಂಟೆಗೆ ಕಿಸಾನ್‌ ಘಾಟ್‌ನಲ್ಲಿ ನಡೆಯಲಿದೆ. ಕೇಂದ್ರ ಸರಕಾರವು ದೇವಿಲಾಲ್‌ ಅವರ ಗೌರವಾರ್ಥ ಮೂರು ದಿನಗಳ ಕಾಲ ರಾಷ್ಟ್ರೀಯ ಶೋಕಾಚರಣೆ ನಡೆಸಲು ನಿರ್ಧರಿಸಿದೆ.

ರಾಜಕೀಯದ ಹಿರಿಯಜ್ಜ ನಾಗಿದ್ದ ದೇವಿಲಾಲ್‌ ಅವರ ನಿಧನಕ್ಕೆ ರಾಷ್ಟ್ರಪತಿ ಕೆ.ಆರ್‌. ನಾರಾಯಣನ್‌, ಪ್ರಧಾನಿ ವಾಜಪೇಯಿ ಗೃಹ ಸಚಿವ ಎಲ್‌.ಕೆ. ಅಡ್ವಾಣಿ ಮತ್ತಿತರ ರಾಷ್ಟ್ರೀಯ ನಾಯಕರು ಸಂತಾಪ ಸೂಚಿಸಿದ್ದಾರೆ.

(ಇನ್ಫೋವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X