ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಶಾಂತಿನಾಥ ಟ್ರಸ್ಟ್ನ ಜಿತೇಂದ್ರರಿಗೆ ರತ್ನಾಕರವರ್ಣಿ ಪುರಸ್ಕಾರ
ಮಂಗಳೂರು : ಮಹಾಕವಿ ರತ್ನಾಕರವರ್ಣಿ ಪ್ರತಿಷ್ಠಾನ ಸಮಿತಿಯು ಈ ಸಾಲಿನ ರತ್ನಾಕರವರ್ಣಿ ಪ್ರಶಸ್ತಿಯನ್ನು ಎ. ಶಾಂತಿರಾಜ ಶಾಸ್ತ್ರಿ ಟ್ರಸ್ಟ್ನ ಧರ್ಮದರ್ಶಿ ಎಸ್. ಜಿತೇಂದ್ರ ಕುಮಾರ್ ಅವರಿಗೆ ನೀಡಲು ನಿರ್ಧರಿಸಿದೆ.
ಈ ಪ್ರಶಸ್ತಿಯನ್ನು ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ಸಹಕಾರದಲ್ಲಿ ನೀಡಲಾಗುತ್ತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಏಪ್ರಿಲ್ 13ರಂದು ಬಸವನಗುಡಿಯ ಧರ್ಮ ಸ್ಥಳ ಮಂಜುನಾಥ ಸ್ವಾಮಿ ಕಲ್ಯಾಣ ಮಂಟಪದಲ್ಲಿ ನಡೆಸಲಾಗುವುದು.
ಮೂಡಬಿದ್ರೆ ಜೈನಮಠದ ಚಾರುಕೀರ್ತಿ ಪಂಡಿತಾಚಾರ್ಯವರ್ಮಾ ಸ್ವಾಮೀಜಿಗಳು ಪ್ರಶಸ್ತಿ ಪ್ರದಾನ ಮಾಡಲಿದ್ದು, ಕೇಂದ್ರ ಸಚಿವ ವಿ. ಧನಂಜಯ ಕುಮಾರ್ ಅವರು ಭಾಗವಹಿಸಲಿದ್ದಾರೆ ಎಂದು ದಕ್ಷಿಣ ಕನ್ನಡ ಜೈನ ಮೈತ್ರಿಕೂಟದ ಪ್ರಕಟಣೆ ತಿಳಿಸಿದೆ.
(ಇನ್ಫೋ ವಾರ್ತೆ)
Comments
Story first published: Saturday, April 7, 2001, 5:30 [IST]