ಏ. 10 ರಿಂದ 4 ದಿನಗಳ ಪ್ರವಾಸಕ್ಕಾಗಿಇರಾನ್ಗೆ ವಾಜಪೇಯಿ
ನವದೆಹಲಿ : ಇರಾನ್ ಹಾಗೂ ಭಾರತ ನಡುವಿನ ದ್ವಿ ಪಕ್ಷೀಯ ಸಂಬಂಧವನ್ನು ಬಲಪಡಿಸುವ ಉದ್ದೇಶದಿಂದ ಪ್ರಧಾನಿ ವಾಜಪೇಯಿ ಏಪ್ರಿಲ್ 10 ರಿಂದ ನಾಲ್ಕು ದಿನಗಳ ಪ್ರವಾಸಕ್ಕಾಗಿ ಇರಾನ್ಗೆ ತೆರಳುವರು.
ಉಭಯ ದೇಶಗಳ ನಡುವಿನ ತೈಲ, ನೈಸರ್ಗಿಕ ಅನಿಲ, ರಸಗೊಬ್ಬರ ಹಾಗೂ ರೈಲ್ವೆ ಸೇರಿದಂತೆ ಅನೇಕ ಒಪ್ಪಂದಗಳನ್ನು ಉತ್ತಮಗೊಳಿಸುವ ನಿಟ್ಟಿನಲ್ಲಿ ಈ ಪ್ರವಾಸ ಪ್ರಮುಖವಾದುದೆಂದು ನಂಬಲಾಗಿದೆ. ಇದಕ್ಕೂ ಮುನ್ನ 1993 ರಲ್ಲಿ , ಆಗಿನ ಪ್ರಧಾನಿ ಪಿ.ವಿ. ನರಸಿಂಹರಾವ್ ಆಪ್ಘಾನಿಸ್ತಾನ ಪ್ರವಾಸ ಕೈಗೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಏಪ್ರಿಲ್ 11 ರಂದು ಇರಾನ್ನ ಸಂಸತ್ತನ್ನು ಉದ್ದೇಶಿಸಿ ವಾಜಪೇಯಿ ಮಾತನಾಡುವರು. ಅಂತರರಾಷ್ಟ್ರೀಯ ಭಯೋತ್ಪಾದಕತೆ, ವಿಶ್ವಸಂಸ್ಥೆಯ ಸುಧಾರಣೆಗಳು ಹಾಗೂ ಮಧ್ಯಪಾಚ್ಯದಲ್ಲಿನ ಸ್ಥಿತಿಗತಿಗಳನ್ನೊಳಗೊಂಡ ಅಂತರಾಷ್ಟ್ರೀಯ ವಿಷಯಗಳು ಮಾತ್ರವಲ್ಲದೆ, ಸ್ಥಳೀಯ ವಿಷಯಗಳ ಸಂಬಂಧವಾಗಿಯೂ ಇರಾನ್ ನಾಯಕತ್ವದೊಂದಿಗೆ ವಾಜಪೇಯಿ ಚರ್ಚಿಸುವರು.
(ಯುಎನ್ಐ)
More From
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications