ಕಾಂಗ್ರೆಸ್ ಅಧ್ಯಕ್ಷ ಪಟ್ಟಕ್ಕೆ ರೇಸಿನಲ್ಲಿಲ್ಲ ದ ಅಲ್ಲಂ ವೀರಭದ್ರಪ್ಪ
ಬೆಂಗಳೂರು : ರಾಜಶೇಖರನ್, ಬಸವರಾಜು, ಮಲಕರೆಡ್ಡಿ , ಜಾಫರ್ ಷರೀಫ್.. ಅವರ್ನ ಬಿಟ್ಟು ಇವರ್ನ ಬಿಟ್ಟು ಅಲ್ಲಂ ವೀರಭದ್ರಪ್ಪ ಎನ್ನುವ ರೇಸಿನಲ್ಲಿಲ್ಲದ ಕುದುರೆಯ ಮೇಲೆ ಸೋನಿಯಾಗಾಂಧಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಕೌಜಲಗಿ ರಾಜೀನಾಮೆಯ ನಂತರ ತೆರವಾಗಿದ್ದ ರಾಜ್ಯ ಕಾಂಗ್ರೆಸ್ ಅಧ್ಯಕ್ಷರ ಪದಕ್ಕೆ ತೋಟಗಾರಿಕೆ ಸಚಿವ ಅಲ್ಲಂ ವೀರಭದ್ರಪ್ಪ ಅವರ ಹೆಸರನ್ನು ಬುಧವಾರ ದೆಹಲಿಯಲ್ಲಿ ಸೋನಿಯಾ ಹಾಗೂ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪ್ರಕಟಿಸುವುದರೊಂದಿಗೆ ಹೆಚ್ಚೂ ಕಡಿಮೆ ಒಂದು ವಾರದ ರಾಜಕೀಯ ಚಟುವಟಿಕೆಗಳಿಗೆ ತೆರೆ ಬಿದ್ದಿದೆ.
ಈವರೆಗಿನ ಲೆಕ್ಕಾಚಾರಗಳ ಪ್ರಕಾರ, ಲಿಂಗಾಯಿತ ಧುರೀಣ ಎಂ.ವಿ. ರಾಜಶೇಖರನ್ ಅವರು ಕಾಂಗ್ರೆಸ್ ಅಧ್ಯಕ್ಷರಾಗುವುದು ಖಚಿತವಾಗಿತ್ತು . ಕೃಷ್ಣ ಅವರ ಒಲವು ಕೂಡ ಪುಣ್ಯಕೋಟಿ ಎಂದೆನಿಸಿಕೊಂಡಿರುವ ರಾಜಶೇಖರನ್ ಕಡೆಗಿತ್ತು . ಆದರೆ, ಬಲ್ಲ ಮೂಲಗಳ ಪ್ರಕಾರ, ರಾಜಶೇಖರನ್ ಅವರೇ ಅಧ್ಯಕ್ಷ ಪದವನ್ನು ಒಲ್ಲೆ ಅಂದಿದ್ದಾರೆ. ಪ್ರಸ್ತುತ ಜಪಾನ್ನಲ್ಲಿರುವ ಅವರು, ದೇಹಸ್ಥಿತಿ ಸೂಕ್ಷ್ಮವಾಗಿರುವ ಕಾರಣ ಅಧ್ಯಕ್ಷ ಪದ ನಿರ್ವಹಿಸಲು ಸಾಧ್ಯವಾಗದು ಎಂದಿದ್ದಾರೆ. ಇದರಿಂದಾಗಿ ಅದೃಷ್ಟ ವೀರಭದ್ರಪ್ಪನವರಿಗೊಲಿಯಿತು.
ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕ ಹೊಂದಿರುವುದಕ್ಕೆ ಅಲ್ಲಂ ಸಂತೋಷ ವ್ಯಕ್ತಪಡಿಸಿದ್ದಾರೆ. ಆದರೆ, ಇದೇ ಕಾಲಕ್ಕೆ ಮಂತ್ರಿ ಪದವಿ ಕಳಕೊಳ್ಳುತ್ತಿರುವುದಕ್ಕೆ ಅವರಿಗೆ ಬೇಸರವೂ ಇದೆ. ಅಂದಹಾಗೆ, ವೀರಭದ್ರಪ್ಪನವರಿಗೆ ಈಗಿನ್ನೂ 53 ವರ್ಷ. ಅವರ ಮೊದಲ ಆದ್ಯತೆ ಪಕ್ಷದ ಬಲವರ್ಧನೆಯಂತೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications