Get Updates
Get notified of breaking news, exclusive insights, and must-see stories!

ಭರಮಸಾಗರ ಬಳಿ ರಸ್ತೆ ಅಪಘಾತ : ಐದು ಜನರ ಸಾವು

ದಾವಣಗೆರೆ : ಭರಮಸಾಗರ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಟಾಟಾ ಸುಮೋ ಹಾಗೂ ಲಾರಿಯ ನಡುವೆ ಶುಕ್ರವಾರ ಸಂಜೆ ಸಂಭವಿಸಿದ ಮುಖಾಮುಖಿಯಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಮುಂಬಯಿಯಿಂದ ಊಟಿಗೆ ಪ್ರವಾಸಕ್ಕೆಂದು ಬರುತ್ತಿದ್ದ 8 ಮಂದಿ ಇದ್ದ ಟಾಟಾ ಸುಮೋಗೆ ಎದುರಿನಿಂದ ಬರುತ್ತಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಈ ಅಪಘಾತ ಸಂಭವಿಸಿತು. ಮತ್ತೊಂದು ಲಾರಿಯನ್ನು ಓವರ್‌ಟೆಕ್‌ ಮಾಡುವ ಯತ್ನದಲ್ಲಿ ತಮಿಳುನಾಡು ಕಡೆಯಿಂದ ಬರುತ್ತಿದ್ದ ಲಾರಿ ಟಾಟಾ ಸುಮೋಗೆ ಡಿಕ್ಕಿ ಹೊಡೆಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಸುಮೋ ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಅದರಲ್ಲಿ ಪ್ರಯಾಣಿಸುತ್ತಿದ್ದ ಐದು ಮಂದಿ ಸ್ಥಳದಲ್ಲೇ ಮೃತಪಟ್ಟರು. 12ದ ಬಾಲಕಿ ಸೇರಿದಂತೆ ಮೂವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಗಿದೆ.

ಅಪಘಾತದಲ್ಲಿ ಸತ್ತವರನ್ನು ಸುಮೋ ಚಾಲಕ ಸಾದಿಕ್‌ (36), ಸಲಾಂ ಸಾಬ್‌ (38), ಶಾಹಿದಾ ಬೇಗಂ (40), ಲಿಯಾಖತ್‌ ಅಲಿ (40) ಹಾಗೂ ಗಫೂರ್‌ ಎಂದು ಗುರುತಿಸಲಾಗಿದೆ. ಲಾರಿಯ ಚಾಲಕ ಹಾಗೂ ಕ್ಲೀನರ್‌ಕೂಡ ಅಪಘಾತದಲ್ಲಿ ಗಾಯಗೊಂಡಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಗೆ ಸೇರಿಸಲಾಗಿದೆ. ಹಿರಿಯ ಪೊಲೀಸ್‌ ಅಧಿಕಾರಿಗಳ ಸ್ಥಳಕ್ಕೆ ಭೇಟಿ ನೀಡಿದ್ದು, ಭರಮಸಾಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

(ದಾವಣಗೆರೆ ಪ್ರತಿನಿಧಿಯಿಂದ)

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+