ಕೃಷ್ಣ ಮನಸ್ಸು ಬದಲಿಸಿದ್ದಾರೆ, ಕಿರಾಣಿ ಅಂಗಡಿಯಲ್ಲಿ ಬಿಯರ್ ಇ-ಲ್ಲ
ಬೆಂಗಳೂರು : ನಗರದ ನೂರು ಕಿರಾಣಿ ಅಂಗಡಿಗಳಲ್ಲಿ ಬಿಯರ್ ಮಾರಲು ಅನುಮತಿ ಕೊಡುವುದಾಗಿ ತೀರ್ಮಾನಿಸಿದ್ದ ಮುಖ್ಯಮಂತ್ರಿ ಕೃಷ್ಣ ತಮ್ಮ ನಿರ್ಧಾರ ಹಿಂತೆಗೆದುಕೊಂಡಿದ್ದಾರೆ.
ಮೊದಲು 300 ಕಿರಾಣಿ ಅಂಗಡಿಗಳಲ್ಲಿ ಬಿಯರು ಮಾರಾಟಕ್ಕೆ ಅನುಮತಿ ಕೊಡುವುದಾಗಿ ಹೇಳಿ, ನಂತರ ಪ್ರತಿಭಟನೆಗೆ ಮುಖ ಮಾಡಿದ ಕೃಷ್ಣ, ಆ ಸಂಖ್ಯೆಯನ್ನು 100ಕ್ಕೆ ಇಳಿಸಿದ್ದರು. ಆದರೆ ಇದಕ್ಕೂ ಒಲ್ಲೆ ಎಂಬ ಸೊಲ್ಲೇ ಹೆಚ್ಚಾಯಿತು. ಜನಸಾಮಾನ್ಯರು, ಅದರಲ್ಲೂ ಅನೇಕ ಮಹಿಳಾ ಸಂಘಟನೆಗಳು ದಿನಸಿ ಅಂಗಡಿಗಳಲ್ಲಿ ಬಿಯರ್ ಮಾರಾಟವನ್ನು ತೀವ್ರವಾಗಿ ವಿರೋಧಿಸಿದ್ದರಿಂದ ಮುಖ್ಯಮಂತ್ರಿ ಕೃಷ್ಣ ಈ ನಿರ್ಧಾರ ಕೈಗೊಂಡಿದ್ದಾರೆ.
ವಿಧಾನಸೌಧದ ಆವರಣದಲ್ಲಿ ಶನಿವಾರ ಸಂಜೆ ನಡೆದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಕೃಷ್ಣ ತಮ್ಮ ನಿರ್ಧಾರವನ್ನು ಬಹಿರಂಗಪಡಿಸಿದರು. ಪರಿಶಿಷ್ಟ ಜಾತಿ ಹಾಗೂ ವರ್ಗಗಳಿಗೆ ಮೀಸಲಾದ ಖಾಲಿ ಇರುವ ಹುದ್ದೆಗಳಿಗೆ ಇನ್ನು 4 ತಿಂಗಳಲ್ಲಿ ನೇಮಕಾತಿ ಮಾಡಿಕೊಳ್ಳುವಂತೆ ರಾಜ್ಯ ಸಂಪುಟದ ಮೂಲಕ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಲಾಗಿದೆ ಎಂದು ಹೇಳಿದರು.
ಅಂಬೇಡ್ಕರ್ ಜಯಂತಿ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡದ ಮಂದಿಯ ಶ್ರೇಯೋಭಿವೃದ್ಧಿಗೆ ಕೃಷ್ಣ ಹೇಳಿದ ಇನ್ನಷ್ಟು ವಿಷಯಗಳು ಇಂತಿವೆ-
- ಪ.ಜಾ. ಹಾಗೂ ಪ.ಪಂ.ದ ಕ್ಷೇಮಾಭಿವೃದ್ಧಿಗಾಗಿ ಸರ್ಕಾರ ಕೈಗೊಂಡಿರುವ ವಿವಿಧ ಯೋಜನೆಗಳು ಸಮರ್ಪಕವಾಗಿ ಸಾಗುತ್ತಿವೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು ಕೇಂದ್ರ ಸರ್ಕಾರದ ಮಾದರಿಯಲ್ಲಿ ಸಮಿತಿಯಾಂದನ್ನು ರಚಿಸಲಾಗುವುದು
- ಪ.ಜಾ. ಹಾಗೂ ಪ.ಪಂ.ದ ಅರ್ಹ 5 ಸಾವಿರ ನಿರುದ್ಯೋಗಿಗಳಿಗೆ ವಿವಿಧ ವೃತ್ತಿಗಳಲ್ಲಿ ತರಪೇತಿ ನೀಡುವುದು
- ನಿರುದ್ಯೋಗಿ ಪರವೀಧರರ ಪೈಕಿ 5 ಸಾವಿರ ಮಂದಿಗೆ ಕಂಪ್ಯೂಟರ್ ತರಪೇತಿ
- ಗಂಗಾ ಕಲ್ಯಾಣ ಯೋಜನೆಯಡಿ 5 ಸಾವಿರ ಜನರಿಗೆ ನೀರಾವರಿ ಸೌಲಭ್ಯ
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications