ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ದೇಶದ ಪ್ರಗತಿಗೆ ಶ್ರಮಿಸಿದ ದೇವಾಂಗ್‌ ಮೆಹ್ತಾ - ನಾರಾಯಣಮೂರ್ತಿ

By Staff
|
Google Oneindia Kannada News

ನವದೆಹಲಿ : ಭಾರತದ ಮಾಹಿತಿ ತಂತ್ರಜ್ಞಾನದ ಕಾರಣಪುರುಷರೆಂದೇ ಪ್ರಸಿದ್ಧರಾಗಿದ್ದ ದಿವಂಗತ ದೇವಾಂಗ್‌ ಮೆಹ್ತಾ ಅವರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ಲೋಧಿ ರಸ್ತೆಯ ಚಿತಾಗಾರದಲ್ಲಿ ನಡೆಯಿತು.

ಕೇಂದ್ರ ಹಣಕಾಸು ಸಚಿವ ಯಶವಂತ ಸಿನ್ಹಾ , ಮಾಹಿತಿ ತಂತ್ರಜ್ಞಾನ ಸಚಿವ ಪ್ರಮೋದ್‌ ಮಹಾಜನ್‌ ಹಾಗೂ ಇನ್ಫೋಸಿಸ್‌ ಅಧ್ಯಕ್ಷ ನಾರಾಯಣಮೂರ್ತಿ ಮೃತರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಗುರುವಾರ ಬೆಳಿಗ್ಗೆ ಮೆಹ್ತಾ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಶನಿವಾರ ಅವರ ದೇಹವನ್ನು ಭಾರತಕ್ಕೆ ತರಲಾಗಿತ್ತು .

ಭಾರತವನ್ನು ಪ್ರಗತಿ ಪಥದತ್ತ ಒಯ್ಯಲು ಮೆಹ್ತಾ ಶ್ರಮಿಸುತ್ತಿದ್ದರು, ನಾವು ಅವರನ್ನು ಕಳೆದುಕೊಂಡಿದ್ದೇವೆ, ಎಂದು ನಾರಾಯಣಮೂರ್ತಿ ಮೆಹ್ತಾ ಅವರ ಸಾವಿಗೆ ಶೋಕ ವ್ಯಕ್ತ ಪಡಿಸಿದರು.

(ಇನ್ಫೋ ವಾರ್ತೆ)

ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X