ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ದೇಶದ ಪ್ರಗತಿಗೆ ಶ್ರಮಿಸಿದ ದೇವಾಂಗ್ ಮೆಹ್ತಾ - ನಾರಾಯಣಮೂರ್ತಿ
ನವದೆಹಲಿ : ಭಾರತದ ಮಾಹಿತಿ ತಂತ್ರಜ್ಞಾನದ ಕಾರಣಪುರುಷರೆಂದೇ ಪ್ರಸಿದ್ಧರಾಗಿದ್ದ ದಿವಂಗತ ದೇವಾಂಗ್ ಮೆಹ್ತಾ ಅವರ ಅಂತ್ಯಕ್ರಿಯೆ ಭಾನುವಾರ ಬೆಳಿಗ್ಗೆ ಲೋಧಿ ರಸ್ತೆಯ ಚಿತಾಗಾರದಲ್ಲಿ ನಡೆಯಿತು.
ಕೇಂದ್ರ ಹಣಕಾಸು ಸಚಿವ ಯಶವಂತ ಸಿನ್ಹಾ , ಮಾಹಿತಿ ತಂತ್ರಜ್ಞಾನ ಸಚಿವ ಪ್ರಮೋದ್ ಮಹಾಜನ್ ಹಾಗೂ ಇನ್ಫೋಸಿಸ್ ಅಧ್ಯಕ್ಷ ನಾರಾಯಣಮೂರ್ತಿ ಮೃತರ ಅಂತಿಮ ಸಂಸ್ಕಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ಗುರುವಾರ ಬೆಳಿಗ್ಗೆ ಮೆಹ್ತಾ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಶನಿವಾರ ಅವರ ದೇಹವನ್ನು ಭಾರತಕ್ಕೆ ತರಲಾಗಿತ್ತು .
ಭಾರತವನ್ನು ಪ್ರಗತಿ ಪಥದತ್ತ ಒಯ್ಯಲು ಮೆಹ್ತಾ ಶ್ರಮಿಸುತ್ತಿದ್ದರು, ನಾವು ಅವರನ್ನು ಕಳೆದುಕೊಂಡಿದ್ದೇವೆ, ಎಂದು ನಾರಾಯಣಮೂರ್ತಿ ಮೆಹ್ತಾ ಅವರ ಸಾವಿಗೆ ಶೋಕ ವ್ಯಕ್ತ ಪಡಿಸಿದರು.
(ಇನ್ಫೋ ವಾರ್ತೆ)
ವಾರ್ತಾ
ಸಂಚಯ
ಮುಖಪುಟ
/
ಇವತ್ತು...
ಈ
ಹೊತ್ತು...
Comments
Story first published: Sunday, April 15, 2001, 5:30 [IST]