ಮುಕ್ತ ಚರ್ಚೆಗೆ ಬನ್ನಿ , ವಿರೋಧಿಗಳಿಗೆ ಮಾತೆಮಹಾದೇವಿ ಸವಾಲು
ಹುಬ್ಬಳ್ಳಿ : ನಿರಾಕಾರನಾದ ಲಿಂಗದೇವರನ್ನು ಕೂಡಲಸಂಗಮ ಎಂದು ಬಸವಣ್ಣನವರು ಹೆಸರಿಸಿದ್ದಾರೆ. ಕೂಡಲಸಂಗಮ ಎನ್ನುವ ಪದ ಸೀಮಿತಾರ್ಥ ಹೊಂದಿರುವುದರಿಂದ, ತಾತ್ವಿಕ ಹಿನ್ನೆಲೆಯಲ್ಲಿ ಅಂಕಿತವನ್ನು ಲಿಂಗದೇವ ಎಂದು ಬಳಸಿರುವುದಾಗಿ ಸಮರ್ಥಿಸಿಕೊಂಡಿರುವ ಮಾತೆ ಮಹಾದೇವಿ, ಮುಕ್ತ ಚರ್ಚೆಗೆ ಬರುವಂತೆ ತಮ್ಮ ಟೀಕಾಕರರಿಗೆ ಸವಾಲೆಸೆದಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಅಕ್ಕ ಮಹಾದೇವಿ ವಚನವನ್ನು ತಿದ್ದಿಲ್ಲ , ಬದಲಾಗಿ ಶರವಾಣಿ ಧ್ವನಿ ಮುದ್ರಿಕೆಯಲ್ಲಿನ ನಾಲ್ಕು ವಚನಗಳಿಗೆ ಚೆನ್ನಮಲ್ಲಿಕಾರ್ಜುನ ಎಂದಿರುವಲ್ಲಿ ಲಿಂಗದೇವ ಎಂದು ಬಳಸಲಾಗಿದೆ ಅಷ್ಟೇ ಎಂದರು. ಬಸವಣ್ಣ ಹಾಗೂ ಅಕ್ಕನವರ ವಚನಗಳನ್ನು ಬದಲಿಸಿರುವ ಹಿನ್ನೆಲೆಯಲ್ಲಿ ತಮಗೆ ಯಾವುದೇ ದುರುದ್ದೇಶವಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ನಿರಾಕಾರನಾದ ದೇವರಿಗೆ ಆಕಾರ, ಸ್ವರೂಪವಿಲ್ಲ ಎಂದಿರುವ ಬಸವಾದಿ ಪ್ರಮಥರ ತತ್ವ, ಆದರ್ಶಗಳನ್ನು ಎತ್ತಿ ಹಿಡಿದಿರುವುದಾಗಿ ಬಣ್ಣಿಸಿಕೊಂಡರು.
ಸಾಮಾಜಿಕ ಬಹಿಷ್ಕಾರ ಹಾಕಬೇಕೆನ್ನುವ ವೀರಶೈವ ಪ್ರಮುಖರ ಬೆದರಿಕೆಗೆ ವಿಚಲಿತರಾಗಿಲ್ಲ ಎಂದು ಸ್ಪಷ್ಟಪಡಿಸಿದ ಮಾತೆ ಮಹಾದೇವಿ, ಯಾರು ಏನೇ ಹೇಳಲಿ, ತಾವು ಅದಕ್ಕೆ ಬಗ್ಗುವುದಿಲ್ಲ ಎಂದರು. ವೀರಶೈವ ಮಹಾಸಭಾದ ಪದಾಧಿಕಾರಿಗಳು ತಮ್ಮ ವಿರುದ್ಧ ಅಪ ಪ್ರಚಾರ ನಡೆಸುತ್ತಿದ್ದಾರೆ ಎಂದು ಆಪಾದಿಸಿದ ಮಹಾದೇವಿ, ಟೀಕಾಕಾರರನ್ನು ಮುಕ್ತ ಚರ್ಚೆಗೆ ಬರುವಂತೆ ಆಹ್ವಾನಿಸಿದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications