ಸೋಮವಾರದಿಂದ ಬಜೆಟ್ ಅಧಿವೇಶನ, ಕಟ್ಟೆಚ್ಚರದಲ್ಲಿ ಭದ್ರತಾ ಸಿಬ್ಬಂದಿ
ನವದೆಹಲಿ : ಪ್ರಸಕ್ತ ಸಾಲಿನ ಆಯವ್ಯಯ ಹಾಗೂ ರೈಲ್ವೆ ಆಯವ್ಯಯಗಳ ಮೇಲಿನ ಚರ್ಚೆಯ ಬಜೆಟ್ ಅಧಿವೇಶನ ಸೋಮವಾರದಿಂದ ಪುನಃ ಪ್ರಾರಂಭವಾಗಲಿದ್ದು , ತೆಹಲ್ಕಾ ಹಗರಣದ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಮತ್ತೊಮ್ಮೆ ಕಲಾಪಕ್ಕೆ ಅಡ್ಡಿ ಉಂಟು ಮಾಡುವ ಪ್ರಶ್ನೆಗಳು ಒಂದೆಡೆ ಉದ್ಭವವಾಗಿದ್ದರೆ, ಮತ್ತೊಂದೆಡೆ ದೆಹಲಿ ಪೊಲೀಸರು ನಿದ್ದೆ ಕೆಡಿಸಿಕೊಂಡಿದ್ದಾರೆ.
ಕುತೂಹಲಕಾರಿ ಬಜೆಟ್ ಅಧಿವೇಶನದ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿಗಳ ಕಚೇರಿ, ಸಂಸತ್ಭವನ , ದೇಶೀ ಹಾಗೂ ವಿದೇಶಿ ಗಣ್ಯರ ನಿವಾಸಗಳಿಗೆ ಕಟ್ಟುನಿಟ್ಟಿನ ಭದ್ರತೆ ಏರ್ಪಡಿಸಲಾಗಿದೆ. ಏಪ್ರಿಲ್ 10 ರಂದು ಪಾರ್ಲಿಮೆಂಟ್ ಭವನಕ್ಕೆ ಸಮೀಪದ ನಾರ್ತ್ ಬ್ಲಾಕ್ ಸಮೀಪ 4 ಕಿಲೋ ತೂಕದ ಶಕ್ತಿಶಾಲಿ ಸ್ಫೋಟಕ ಪತ್ತೆಯಾದ ಕಾರಣ ಹಾಗೂ ವಿವಿಧ ಪ್ರತಿಭಟನಾ ರ್ಯಾಲಿಗಳ ಆಯೋಜನೆಯ ಹಿನ್ನೆಲೆಯಲ್ಲಿ ಸುಮಾರು 57 ಸಾವಿರ ಭದ್ರತಾ ಸಿಬ್ಬಂದಿ ಕಟ್ಟೆಚ್ಚರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭದ್ರತಾ ಕಾರ್ಯಗಳಿಗಾಗಿ 9 ಸಾವಿರ ಹೋಂಗಾರ್ಡ್ಗಳ ಸೇವೆಯನ್ನೂ ಪಡೆಯಲಾಗಿದೆ.
ಕಾರ್ಯತಂತ್ರ ಗುಟ್ಟು ಬಿಟ್ಟಕೊಡದ ಪ್ರತಿ ಪಕ್ಷಗಳು
ಸೋಮವಾರದಿಂದ ಪ್ರಾರಂಭವಾಗುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವ ಅಥವಾ ಬಹಿಷ್ಕರಿಸುವ ಕುರಿತಂತೆ ಯಾವುದೇ ನಿರ್ಧಾರವನ್ನು ಪ್ರಮುಖ ಪ್ರತಿಪಕ್ಷಗಳು ಈವರೆಗೆ ಪ್ರಕಟಿಸಿಲ್ಲ . ಸರ್ಕಾರ ತಪ್ಪು ಮಾಡಿದಾಗ ಅದನ್ನು ಯಾರೂ ಪ್ರಶ್ನಿಸುತ್ತಿಲ್ಲ , ಪ್ರತಿ ಪಕ್ಷಗಳು ಪ್ರಶ್ನಿಸಿದರೆ ಅದನ್ನು ಕಲಾಪ ಬಹಿಷ್ಕಾರವೆಂದು ಮಾಧ್ಯಮಗಳು ಕರೆಯುತ್ತವೆ ಎಂದು ಕಾಂಗ್ರೆಸ್ ಪ್ರಮುಖ ಆಸ್ಕರ್ ಫರ್ನಾಂಡಿಸ್ ಮುಗುಮ್ಮಾಗಿ ಹೇಳಿದ್ದಾರೆ.
ಮತ್ತೊಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್, ಕಲಾಪ ಬಹಿಷ್ಕಾರ ನಮ್ಮ ಉದ್ದೇಶವಲ್ಲ , ಆದರೆ ಪ್ರತಿಪಕ್ಷಗಳು ಕೆರಳದಂತೆ ಸರ್ಕಾರ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಹೇಳಿದ್ದಾರೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications