ಹೈದ್ರಾಬಾದ್ ಕರ್ನಾಟಕ 18 ಮಹಾ ಕವಿಗಳ ತವರು : ಸಬರದ
ಆಳಂದ : ಹೈದರಾಬಾದ್ ಕರ್ನಾಟಕದ ಮಹಾಕವಿಗಳ ತವರು. ನವೋದಯ ಆರಂಭವಾಗುವ ಮೊದಲ ಪೂರ್ವ ಯುಗದಲ್ಲಿ ಹರಿಹರ, ರಾಘವಾಂಕ, ಚಾಮರಸ, ಮುದ್ದಣ, ಲಕ್ಷ್ಮೀಶರೇ ಮೊದಲಾದ 18 ಮಹಾಕವಿಗಳು ರಚಿಸಿದ ಕಾವ್ಯಗಳು ಸರ್ವಶ್ರೇಷ್ಠವಾಗಿವೆ ಎಂದು ಪ್ರೊ. ಬಸವರಾಜ ಸಬರದ ಹೇಳಿದರು.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ 1870ರಿಂದ 1940ರ ಅವಧಿಯಲ್ಲಿ 18 ಮಹಾ ಕವಿಗಳು ರಚಿಸಿದ ಮಹಾಕಾವ್ಯಗಳ ಬಗ್ಗೆ ಸಂಶೋಧನೆ ನಡೆಸಿ, ಪ್ರೌಢಪ್ರಬಂಧ (ಪಿ.ಎಚ್.ಡಿ.) ಮಂಡಿಸಲು ಗುಲ್ಬರ್ಗಾ ವಿಶ್ವವಿದ್ಯಾಲಯ ಅವಕಾಶ ಕಲ್ಪಿಸಿದೆ ಎಂದು ಗುಲ್ಬರ್ಗಾ ವಿ.ವಿ. ಕನ್ನಡ ವಿಭಾಗದ ಪ್ರಾಧ್ಯಾಪಕರೂ ಆದ ಪ್ರೊ. ಬಸವರಾಜ ಸಬರದ ತಿಳಿಸಿದರು.
ಆಳಂದ ತಾಲೂಕಿನ ನಿಂಬರ್ಗಾ ಗ್ರಾಮದಲ್ಲಿ ನಡೆದ ವಲಯ ಮಟ್ಟದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾತನಾಡುತ್ತಿದ್ದ ಅವರು, ದಾಸರು, ತತ್ವಪದಗಾರರು ಹಾಗೂ ಶರಣರು ನೀಡಿದ ಸಾಹಿತ್ಯ ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಹೊಸ ಆಯಾಮ ನೀಡಿದೆ ಎಂದರು.
ಪಾಶ್ಚಾತ್ಯ ಸಂಸ್ಕೃತಿಯ ಪ್ರಭಾವದಿಂದ ನಮ್ಮ ನಾಡಿನಲ್ಲೂ ರಮ್ಯ ಸಾಹಿತ್ಯ ಕೃಷಿ ಆರಂಭವಾಯಿತು. ರಸಋಷಿ ಕುವೆಂಪು, ಕನ್ನಡದ ಕಣ್ವ ಬಿ.ಎಂ.ಶ್ರೀ. ರಮ್ಯ ಕಾವ್ಯ ಯುಗಕ್ಕೆ ನಾಂದಿ ಹಾಡಿದ ಮಹನೀಯರು ಎಂದ ಸಬರದ ಅವರು, ಉತ್ತರ ಕರ್ನಾಟಕದಲ್ಲಿ ದ.ರಾ. ಬೇಂದ್ರೆ, ದಕ್ಷಿಣ ಕರ್ನಾಟಕದ ಭಾಗದಲ್ಲಿ ಕುವೆಂಪು ಅವರಂಥ ಕವಿಶ್ರೇಷ್ಠರಿದ್ದರೆ, ಹೈದರಾಬಾದ್ ಕರ್ನಾಟಕದಲ್ಲಿ 18 ಕವಿ ಸಾರ್ವಭೌಮರಿದ್ದರು ಎಂದರು.
ರಾಜ್ಯ ಲಲಿತ ಕಲಾ ಅಕಾಡಮಿ ಅಧ್ಯಕ್ಷ ಪ್ರೊ. ಅಂದಾನಿ, ಡಾ. ಸ್ವಾಮಿರಾವ್ ಕುಲಕರ್ಣಿ ಮೊದಲಾದವರು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು. ಶಿವಲಿಂಗ ತೇಲ್ಕರ್ ಸ್ವಾಗತ ಕೋರಿದರು.
(ನಮ್ಮ ಪ್ರತಿನಿಧಿಯಿಂದ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications