ರಾಜ್ಯದಲ್ಲಿ ಬೀಟಿ, ಅವಸರ ಬೇಡಿ - ಡಾ.ಟಿ.ಎಂ.ಮಂಜುನಾಥ್
ಬೆಂಗಳೂರು : ಜೈವಿಕ ತಂತ್ರಜ್ಞಾನದಿಂದ ಅಭಿವೃದ್ಧಿ ಪಡಿಸಲಾದ ಕೃಷಿ ತಳಿಗಳು ನಮ್ಮ ರಾಜ್ಯದಲ್ಲಿ ಇನ್ನೂ ಪ್ರಯೋಗಾರ್ಥವಾಗಿವೆ. ಈ ಕಾರಣ ಅವುಗಳಲ್ಲಿ ಕೆಲವು ನ್ಯೂನತೆಗಳೂ ಇವೆ. ಹೀಗಾಗಿ ಅವಸರದಲ್ಲಿ ಹೆಜ್ಜೆ ಇಡಕೂಡದು ಎಂದು ಮಾನ್ಸಾಂಟೊ ಸಂಶೋಧನಾ ಕೇಂದ್ರದ ನಿರ್ದೇಶಕ ಡಾ.ಟಿ.ಎಂ.ಮಂಜುನಾಥ್ ಹೇಳಿದ್ದಾರೆ.
ನಗರದ ಅರಮನೆ ಆವರಣದಲ್ಲಿ ನಡೆದಿರುವ ದೇಶದ ಪ್ರಥಮ ಜೈವಿಕ ತಂತ್ರಜ್ಞಾನ ಮೇಳ ಬೆಂಗಳೂರು ಬಯೋ ಡಾಟ್ಕಾಂನಲ್ಲಿ ಸೋಮವಾರ ವಿಚಾರ ಸಂಕಿರಣವೊಂದರಲ್ಲಿ ಅವರು ಮಾತಾಡುತ್ತಿದ್ದರು. ಬಿಟಿ ಹತ್ತಿ ಬೆಳೆ ರಾಜ್ಯದ ಪ್ರಯೋಗಾರ್ಥ ಕೃಷಿ. ಯಾವುದೋ ಒಂದು ಪ್ರಬೇಧದ ಕೀಟಾಣುಗಳಿಂದ ಬಿಟಿ ಹತ್ತಿಗೆ ಬಾಧೆಯಾಗದು. ಆದರೆ ಇನ್ನಿತರ ಕೀಟಾಣುಗಳಿಂದ ರಕ್ಷಿಸಲು ರಾಸಾಯನಿಕಗಳ ಬಳಕೆ ಅನಿವಾರ್ಯ ಎಂದು ಮಂಜುನಾಥ್ ಪ್ರಶ್ನೆಯಾಂದಕ್ಕೆ ಉತ್ತರ ಕೊಟ್ಟರು.
ಆಯುರ್ವೇದ ಮೊದಲಾದ ಪರ್ಯಾಯ ಚಿಕಿತ್ಸಾ ವಿಧಾನಗಳು ಈಚಿನ ದಿನಗಳು ಬಹಳ ಯಶಸ್ವಿಯಾಗಿವೆ ಎಂದು ಅದೇ ವಿಚಾರ ಸಂಕಿರಣದಲ್ಲಿ ಮಾತನಾಡಿದ ಡಾ.ರಾಘವನ್ ತಿಳಿಸಿದರು.
ಜೈವಿಕ ತಂತ್ರಜ್ಞಾನ ಕ್ಷೇತ್ರದ ವ್ಯಾಪ್ತಿ, ಈ ಕ್ಷೇತ್ರದಲ್ಲಿ ಯುವಕರಿಗಿರುವ ಅವಕಾಶಗಳು, ಎಚ್ಐವಿ ಪೀಡಿತ ರೋಗಿಗಳಿಗೆ ನೂತನ ಚಿಕಿತ್ಸೆ, ಪೇಟೆಂಟ್ ಮೊದಲಾದ ವಿಷಯಗಳ ಕುರಿತು ವಿವಿಧ ವಿಚಾರ ಸಂಕಿರಣಗಳಲ್ಲಿ ಚರ್ಚಿಸಲಾಯಿತು.
ಬೆಂಗಳೂರಿನ ಮಳಿಗೆಗಳಿಗೆ ಪುರಸ್ಕಾರ : ರಾಜ್ಯದ ಜೈವಿಕ ತಂತ್ರಜ್ಞಾನ ಇಲಾಖೆಯ ಹಾಗೂ ರಾಜ್ಯ ತೋಟಗಾರಿಕಾ ಇಲಾಖೆಯ ಹುಳಿಮಾವು ಜೈವಿಕ ತಂತ್ರಜ್ಞಾನ ಮಳಿಗೆಗಳಿಗೆ ಉತ್ತಮ ಮಳಿಗೆ ಪ್ರಶಸ್ತಿಗಳು ದೊರೆತಿವೆ. ಧಾರಾಕಾರ ಸುರಿಯುತ್ತಿರುವ ಮಳೆಯ ನಡುವೆಯೂ ಈವರೆಗೆ 15 ಸಾವಿರ ಮಂದಿ ಈ ಮೇಳಕ್ಕೆ ಭೆಟ್ಟಿ ನೀಡಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications