ಬೆಂಗಳೂರಿನಲ್ಲಿ ಧಾರಾಕಾರ ಮಳೆ, ಮೂವರು ಮಳೆಗೆ ಹಾರ
ಬೆಂಗಳೂರು : ಸೋಮವಾರ ಮಧ್ಯಾಹ್ನ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ಕನಿಷ್ಠ ಮೂವರು ಬಲಿಯಾಗಿದ್ದು , ತಗ್ಗು ಪ್ರದೇಶದಲ್ಲಿರುವ ನೂರಾರು ಮನೆ, ಗುಡಿಸಲುಗಳು ಜಲಾವೃತಗೊಂಡಿವೆ. ತೆಂಗಿನ ಮರಗಳು ಬುಡ ಕೆಳಗಾಗಿದ್ದರೆ, ರಸ್ತೆಗೆ ಅಡ್ಡ ಬಿದ್ದಿರುವ ಮರಗಳಿಂದ ಸಂಚಾರಕ್ಕೆ ತೊಂದರೆ ಉಂಟಾಗಿದೆ.
ಕೆಂಗೇರಿ ಪೋಲಿಸ್ ಠಾಣೆ ವ್ಯಾಪ್ತಿಯ ಸಾರಾ ಗಾರ್ಮೆಂಟ್ಸ್ ಹಿಂಭಾಗದ ಚರಂಡಿ ನೀರಿನಲ್ಲಿ ಅಣ್ಣಯ್ಯಪ್ಪ (50) ಎನ್ನುವ ವ್ಯಕ್ತಿ ಕೊಚ್ಚಿ ಹೋಗಿದ್ದಾನೆ. ಜ್ಞಾನಭಾರತಿ ಸಮೀಪ ಹರಿಯುವ ವೃಷಭಾವತಿ ನೀರಿನಲ್ಲಿ ಅಪರಿಚಿತ ವ್ಯಕ್ತಿಯಾಬ್ಬ ತೇಲಿ ಬಂದಿದ್ದು , ಪೊಲೀಸರು ಶವವನ್ನು ಕಷ್ಟಪಟ್ಟು ರಕ್ಷಿಸಿದ್ದಾರೆ. ಶಿವಾಜಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಬ್ರಾಡ್ವೇ ರಸ್ತೆಯ ಮಳೆನೀರಿನ ಚರಂಡಿಯಲ್ಲಿ ಮತ್ತೊಬ್ಬ ಅಪರಿಚಿತ ವ್ಯಕ್ತಿಯ ಶವ ಪೊಲೀಸರಿಗೆ ದೊರೆತಿದೆ.
ಕೃಷ್ಣರಾಜೇಂದ್ರ ಮಾರುಕಟ್ಟೆಯ ವ್ಯಾಪಾರ ಸಮುಚ್ಚಯ ಕಟ್ಟಡದ ಕೆಳ ಅಂತಸ್ತು ಹಾಗೂ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ಭಾರೀ ಪ್ರಮಾಣದ ನೀರು ನಿಂತಿದ್ದು , ಅಲ್ಲಿನ ಪರಿಸರ ಸೋಮವಾರ ರಾತ್ರಿ ಕೆರೆಯನ್ನು ಹೋಲುತ್ತಿತ್ತು . ಅಂಗಡಿ ಮುಂಗಟ್ಟಿಗೆ ನೀರು ನುಗ್ಗಿದ್ದು , ತರಕಾರಿ ಹಾಗೂ ದಿನಸಿ ವಸ್ತುಗಳು ನೀರಿನಲ್ಲಿ ತೇಲುತ್ತಿದ್ದವು. ಶಿವಾಜಿನಗರ, ಕೋರಮಂಗಲ, ಟ್ಯಾನರಿ ರಸ್ತೆ , ಫ್ರೇಜರ್ ಟೌನ್, ಅಲಸೂರು, ಟ್ಯಾನರಿ ರಸ್ತೆ , ರಾಜಾಜಿನಗರ, ವಿಜಯನಗರ ಮುಂತಾದ ಬಡಾವಣೆಗಳಲ್ಲಿ ಜನರು ಮಳೆಯಿಂದಾಗಿ ತೀವ್ರ ತೊಂದರೆಗೊಳಗಾದರು.
ನಗರದಲ್ಲಿ 100 ಮಿಮೀ ಹಾಗೂ ವಿಮಾನ ನಿಲ್ದಾಣದಲ್ಲಿ ಸುಮಾರು 85 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆಯ ವರದಿ ತಿಳಿಸಿದೆ. ಲಕ್ಷ ದ್ವೀಪದಲ್ಲಿ ಉಂಟಾಗಿರುವ ತೀವ್ರ ಸುಳಿಗಾಳಿಯಿಂದಾಗಿ ಮುಂದಿನ 48 ಗಂಟೆಗಳಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆ ನಗರದಲ್ಲಿ ಮುಂದುವರಿಯುವ ಸಾಧ್ಯತೆಯಿದೆ.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications