ಪ್ರತಿ ಜಿಲ್ಲೆಯಲ್ಲೂ ಬೀಟಿ ಕೇಂದ್ರ ತಲೆಎತ್ತಲಿ - ಕೃಷ್ಣ
ಬೆಂಗಳೂರು : ಕೃಷಿ ಕ್ಷೇತ್ರದಲ್ಲಿ ದಾಪುಗಾಲು ಹಾಕುವ ನಿಟ್ಟಿನಲ್ಲಿ ಜೈವಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಸಂಶೋಧನೆಗೆ ಬೇಕಾದ ಸಕಲ ಸೌಕರ್ಯಗಳನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂಬ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಠರಾವಿನ ಮೂಲಕ 3 ದಿನಗಳ ಬೆಂಗಳೂರು ಬಯೋ ಡಾಟ್ ಕಾಂ ಮೇಳಕ್ಕೆ ತೆರೆ ಬಿದ್ದಿದೆ.
ಐಟಿ ಕ್ಷೇತ್ರದಲ್ಲಿ ರಾಜ್ಯ ಅಂದುಕೊಂಡಿದ್ದನ್ನು ಸಾಧಿಸಿದೆ. ಈಗ ನಮ್ಮ ಮುಂದಿನ ಗುರಿ ಕೃಷಿ ಕ್ಷೇತ್ರದ ಅಭಿವೃದ್ಧಿ . ಜೈವಿಕ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಂಡಲ್ಲಿ ನಾವು ಕೃಷಿ ಕ್ಷೇತ್ರದಲ್ಲೂ ಅಭಿವೃದ್ಧಿ ಹೊಂದಬಹುದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಹಾಗೂ ಆಂಧ್ರಪ್ರದೇಶ ಪರಸ್ಪರ ಸಹಕಾರಿ ಧೋರಣೆ ತಳೆಯಬೇಕು ಎಂದು ಹೈದರಾಬಾದ್ನ ಲ್ಯಾಂಡ್ ಪವರ್ ಬಯೋಟೆಕ್ ಸಂಸ್ಥೆಯ ವೆಬ್ಸೈಟ್ ಉದ್ಘಾಟಿಸಿದ ನಂತರ ಮಂಗಳವಾರ ಕೃಷ್ಣ ಹೇಳಿದರು.
ರಾಜ್ಯದ ಕೃಷಿ ಕ್ಷೇತ್ರದಲ್ಲಿ ಪ್ರಸ್ತುತ ಜೈವಿಕ ತಂತ್ರಜ್ಞಾನದ ಬಳಕೆ ಶೇ.10ಕ್ಕಿಂತಲೂ ಕಡಿಮೆ ಇದೆ. ಚೀನಾ ಕೃಷಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಿರುವುದು ಜೈವಿಕ ತಂತ್ರಜ್ಞಾನದಿಂದಲೇ ಎಂಬುದನ್ನು ನಾವು ಮನಗಾಣಬೇಕು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಜೈವಿಕ ತಂತ್ರಜ್ಞಾನ ಪಾರ್ಕ್ ಸ್ಥಾಪನೆಯಾಗಬೇಕು ಎಂದರು.
ಮೇಳಕ್ಕೆ 25 ಸಾವಿರ ಮಂದಿ : ಧೋ ಅಂತ ಸುರಿದ ಮಳೆಯ ನಡುವೆಯೂ 25 ಸಾವಿರ ಮಂದಿ ಬೀಟಿ ಮೇಳವನ್ನು ವೀಕ್ಷಿಸಿದ್ದಾರೆ. ಇವರಲ್ಲಿ ಅರ್ಧಪಾಲು ವಾಣಿಜ್ಯ ಸಂಸ್ಥೆಗಳ ಪ್ರತಿನಿಧಿಗಳದು. ಅಂತಿಮ ದಿನ ಯುವ ಉತ್ಸಾಹಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮೇಳದ ಉದ್ದಿಶ್ಯ ಅರಿಯದ ಇನ್ನು ಕೆಲವು ಜನ ಚೀನಾದ ವಸ್ತುಗಳು ಎಲ್ಲಿ ಸಿಗುತ್ತವೆ ಎಂದು ಹುಡುಕಾಟ ನಡೆಸಿದ್ದರು !
ವೆಬ್ಸೈಟ್ : ಈ ಮೇಳ ರಾಷ್ಟ್ರದಲ್ಲಿ ನಡೆದದ್ದು ಇದೇ ಮೊದಲು. ಜೈವಿಕ ತಂತ್ರಜ್ಞಾನದಲ್ಲಿ ರಾಜ್ಯ ಇನ್ನೂ ಕೂಸು. ಮುಂದೆ ಐಟಿಯಂತೆಯೇ ಬೀಟಿ ಕೂಡ ಸಾಕಷ್ಟು ಅಭಿವೃದ್ಧಿ ಸಾಧಿಸುವುದು ಖರೆ ಎಂದ ಕರ್ನಾಟಕ ಮಾಹಿತಿ ತಂತ್ರಜ್ಞಾನ ಕಾರ್ಯದರ್ಶಿ ವಿವೇಕ್ ಕುಲಕರ್ಣಿ, ಮೇಳದ ಸಾರ ತಿಳಿಯಲು http://www.bangalorebio.com/ ವೆಬ್ಸೈಟಿಗೆ ಭೇಟಿ ಕೊಡಬಹುದು ಎಂದರು.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications