ಧ್ವನಿಮತದಿಂದ ರೈಲ್ವೆ ಬಜೆಟ್ಅಂಗೀಕಾರ, ಉಭಯ ಸದನ ಮುಂದಕ್ಕೆ
ನವದೆಹಲಿ : ಯಾವುದೇ ಚರ್ಚೆಯಿಲ್ಲದೆ ಧ್ವನಿಮತದಿಂದ ರೈಲ್ವೆ ಬಜೆಟ್ಟನ್ನು ಅಂಗೀಕರಿಸುವುದರೊಂದಿಗೆ, ಸಂಸತ್ತಿನ ಉಭಯ ಸದನಗಳು ಸೋಮವಾರ ಮತ್ತೆ ಸೇರುವ ನಿರ್ಣಯದೊಂದಿಗೆ ಶುಕ್ರವಾರದ ಕಲಾಪ ಕೊನೆಗೊಂಡಿತು. ಈ ನಡುವೆ, ತೆಹಲ್ಕಾ ಪ್ರಕರಣದ ತನಿಖೆಗೆ ಸಂಬಂಧಿಸಿ, ಸಂಸದೀಯ ಸಮಿತಿಯನ್ನು ನೇಮಿಸುವ ತನ್ನ ಪಟ್ಟಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಾಂಗ್ರೆಸ್ ಸ್ಪಷ್ಟ ಪಡಿಸಿದೆ.
ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆ ಲೋಕಸಭೆಯ ಬಾವಿಗೆ ನುಗ್ಗಿದ ಕಾಂಗ್ರೆಸ್ನ ಸದಸ್ಯರು ತಮ್ಮ ಎಂದಿನ ಸಂಸದೀಯ ಸಮಿತಿ ರಚನೆಯ ಒತ್ತಾಯದ ಪ್ರತಿಭಟನೆಯನ್ನು ಮುಂದುವರಿಸಿದರು. ಸಭಾಪತಿ ಬಾಲಯೋಗಿ ಅವರು ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿದ್ದು ಯಾವುದೇ ಫಲ ನೀಡಲಿಲ್ಲ . ಆನಂತರವೂ ತಮ್ಮ ಪಟ್ಟು ಸಡಿಲಿಸಲೊಪ್ಪದ ಕಾಂಗ್ರೆಸ್ಸಿಗರು, ಕಲಾಪಕ್ಕೆ ತಡೆಯಾಡ್ಡಿದರು.
ಕಾಂಗ್ರೆಸ್ ಪಕ್ಷದ ಸದಸ್ಯರ ಅಸಹಕಾರದ ಕಾರಣದಿಂದ, ಯಾವುದೇ ಚರ್ಚೆಯಿಲ್ಲದೆ ಧ್ವನಿಮತದಿಂದ ರೈಲ್ವೆ ಬಜೆಟ್ಟನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿತು. ಧ್ವನಿಮತ ಅಂಗೀಕಾರದ ನಂತರ ಲೋಕಸಭೆಯನ್ನು ಸೋಮವಾರಕ್ಕೆ ಮುಂದೂಡಲಾಯಿತು. ರಾಜ್ಯಸಭೆಯದ್ದೂ ಯಥಾವತ್ ಪರಿಸ್ಥಿತಿ. ಇನ್ನುಳಿದಿರುವುದು ಸಿನ್ಹಾ ಮಂಡಿಸಿರುವ ಕೇಂದ್ರ ಆಯವ್ಯಯದ ಅಂಗೀಕಾರ ಮಾತ್ರ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications