ತುಮಕೂರು, ಚಿತ್ರದುರ್ಗ ಜಿಲ್ಲೆಯಲ್ಲಿ ಮಲೇರಿಯಾ : 1 ಸಾವು
ಬೆಂಗಳೂರು : ರಾಜ್ಯಾದ್ಯಂತ ಹಬ್ಬುತ್ತಿರುವ ಮಲೇರಿಯಾ ತಡೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಮಲೇರಿಯಾ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ಮಲೇರಿಯಾ ಹಾವಳಿ ಅತಿಯಾಗಿದೆ.
ತುಮಕೂರು ಜಿಲ್ಲೆಯಲ್ಲಿ ಸುಮಾರು ಒಂದೂವರೆ ಲಕ್ಷ ಜನರ ರಕ್ತ ಪರೀಕ್ಷೆ ಮಾಡಲಾಗಿದೆ. ಈ ಮಧ್ಯೆ ತುಮಕೂರಿನಲ್ಲಿ ಮಲೇರಿಯಾಕ್ಕೆ ಒಬ್ಬರು ಬಲಿಯಾಗಿದ್ದಾರೆ. ಮಲೇರಿಯಾದಿಂದ ವ್ಯಕ್ತಿ ಸತ್ತಿರುವುದನ್ನು ರಾಜ್ಯ ಆರೋಗ್ಯ ಸಚಿವ ಮಲಕರೆಡ್ಡಿ ಅವರೇ ಖಚಿತಪಡಿಸಿದ್ದಾರೆ.
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ, ಚಿತ್ರದುರ್ಗದ ಹೊಳಲ್ಕೆರೆ ಹಾಗೂ ಹೊಸದುರ್ಗದಲ್ಲಿಯೂ ಮಲೇರಿಯಾ ರೋಗದಿಂದ ನರಳುತ್ತಿರುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಮಲೇರಿಯಾ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ ಎಂದೂ ಸಚಿವರು ಹೇಳಿದ್ದಾರೆ.
ಕಳೆದ ವರ್ಷ ಕೂಡ ಚಿಕ್ಕನಾಯಕನಹಳ್ಳಿಯ ಜನರು ಮಲೇರಿಯಾದಿಂದ ತತ್ತರಿಸಿದ್ದರು. ಈ ವರ್ಷವೂ ಇದೇ ಪ್ರದೇಶದಲ್ಲಿ ರೋಗ ಉಲ್ಬಣಿಸಿದೆ. ಕೇಂದ್ರ ಸರಕಾರ ರೋಗ ನಿಯಂತ್ರಣಕ್ಕೆ ನಿಯಮಿತವಾಗಿ ಔಷಧ ಹಾಗೂ ರಾಸಾಯನಿಕ ಕಳುಹಿಸದಿರುವುದೇ ರೋಗ ತೀವ್ರವಾಗಲು ಕಾರಣ ಎಂಬುದು ಆರೋಗ್ಯ ಇಲಾಖೆ ಹೇಳಿಕೆ. ಸಚಿವರು ಕೂಡ ಇದೇ ಮಾತುಗಳನ್ನೇ ಆಡಿದ್ದಾರೆ.
ವಿಶ್ವ ಆರೋಗ್ಯ ಸಂಸ್ಥೆ ಅನವಶ್ಯಕವಾಗಿ ಸೊಳ್ಳೆ ನಾಶಮಾಡುವ ಮಲೇರಿಯಾ ತಡೆ ರಾಸಾಯನಿಕ ಸಂಪಡಿಸುವುದಕ್ಕೆ ತಡೆ ಹಾಕಿದೆ. ರೋಗ ಕಾಣಿಸಿಕೊಂಡ ಸ್ಥಳಗಳಲ್ಲಿ ಮಾತ್ರ ರಾಸಾಯನಿಕ ಸಿಂಪಡಿಸಬಹುದು. ಆದರೆ, ಸಾಕಷ್ಟು ಪ್ರಮಾಣದಲ್ಲಿ ರಾಸಾಯನಿಕ ಕೇಂದ್ರದಿಂದ ಪೂರೈಕೆ ಆಗದೆ ಪರಿಸ್ಥಿತಿ ಹದಗೆಟ್ಟಿದೆ ಎಂದೂ ಅವರು ಹೇಳಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications