ಹೆಣ್ಣು ಶಿಶು ಮಾರಾಟ : ಆಂಧ್ರದಿಂದ ಸಿಐಡಿ ತನಿಖೆ
ಹೈದರಾಬಾದ್ : ಹೆಣ್ಣು ಶಿಶುಗಳ ಮಾರಾಟ ಪ್ರಕರಣದ ತನಿಖೆಗೆ ಆಂಧ್ರ ಪ್ರದೇಶದ ಮುಖ್ಯಮಂತ್ರಿ ಚಂದ್ರ ಬಾಬು ನಾಯ್ಡು ಅವರು ಕ್ರೆೃಂ ಬ್ರಾಂಚ್ ಸಿಐಡಿ ತನಿಖೆಗೆ ಆದೇಶಿಸಿದ್ದು, ರಾಜ್ಯದ ಎಲ್ಲಾ ಅನಾಥಾಲಯಗಳ ಕೆಲಸ ಕಾರ್ಯಗಳ ಮೇಲೆ ನಿಗಾ ಇಡಲು ಪ್ರತ್ಯೇಕ ಮಂಡಳಿಯಾಂದನ್ನು ರಚಿಸಿದ್ದಾರೆ.
ಗಂಭೀರ ಸ್ವಾಸ್ಥ್ಯ ಸಮಸ್ಯೆಗಳಿಂದ ನರಳುತ್ತಿರುವ ಮಕ್ಕಳನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದ ನಂತರ ನಾಯ್ಡು ಈ ಹಗರಣದಲ್ಲಿ ಭಾಗಿಯಾಗಿರುವ ಪಾತಕಿಗಳಲ್ಲೊಬ್ಬನ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದರು.
ಗುಲ್ಬರ್ಗಾವರದಿ : ಲಂಬಾಣಿ ಹೆಣ್ಣು ಶಿಶು ಮಾರಾಟ ಪ್ರಕರಣದ ತನಿಖೆಯನ್ನು ಸಿಓಡಿ ಕೈಗೆತ್ತಿಕೊಂಡಿದೆ. ಕೊಂಚಾವರಂ ಅರಣ್ಯ ವಲಯದ ಚಿಂಚೋಳಿ ತಾಲ್ಲೂಕಿನಲ್ಲಿ ತನಿಖೆ ಕಾರ್ಯವನ್ನು ಆರಂಭಿಸಲಾಗಿದೆ. ಸಿಓಡಿ ಪೊಲೀಸ್ ಅಧೀಕ್ಷಕ ಡಾ. ರವೀಂದ್ರನಾಥ್ ತನಿಖೆ ಸಂಬಂಧ ಗುಲ್ಬರ್ಗಾಕ್ಕೆ ಆಗಮಿಸಿದ್ದಾರೆ.
ಕಳೆದ ಶನಿವಾರಂದಂದು ಬಂಧಿಸಲಾಗಿದ್ದ ಆರೋಪಿ ಸೂರ್ಯಕುಮಾರ್ನ ಅತ್ತೆ ಸರೋಜಾ ಕೂಡ ಶಿಶು ಮಾರಾಟ ಜಾಲದಲ್ಲಿ ಸಕ್ರಿಯವಾಗಿರುವುದು ತಿಳಿದುಬಂದಿದ್ದು, ಆಕೆಯನ್ನೂ ಪೊಲೀಸರು ಬಂಧಿಸಿದ್ದಾರೆ.
ಈ ನಡುವೆ, ಇಲ್ಲಿನ ಓಂ ನಗರದ ಜಾನ್ ಅಬ್ರಾಹಂ ಸ್ಮಾರಕ ಬೆಥನಿ ಹೋಂನಲ್ಲಿ ಎರಡರಿಂದ ನಾಲ್ಕು ತಿಂಗಳ ವಯಸ್ಸಿನೊಳಗಿನ ನಾಲ್ಕು ಹೆಣ್ಣು ಮತ್ತು ಒಂದು ಗಂಡು ಹಸುಳೆಯನ್ನು ವಶಪಡಿಸಿಕೊಳ್ಳಲಾಗಿದೆ. ಈ ಶಿಶುಗಳನ್ನು ರಾಘವೇಂದ್ರ ಬಡಾವಣೆಯ ನಂದಗೋಕುಲ ಅನಾಥಾಲಯದಲ್ಲಿ ಇರಿಸಲಾಗಿದ್ದು, ಖರ್ಚು ವೆಚ್ಚವನ್ನು ಜಿಲ್ಲಾಡಳಿತವೇ ಭರಿಸುತ್ತಿದೆ.
ಸೇಡಂ ಶ್ಲಾಘನೆ : ಲಂಬಾಣಿ ಹೆಣ್ಣು ಶಿಶುಗಳ ಮಾರಾಟ ಜಾಲದ ಪತ್ತೆ ಕಾರ್ಯದಲ್ಲಿ ಯಶಸ್ವಿಯಾಗುತ್ತಿರುವ ಗುಲ್ಬಾರ್ಗ ಜಿಲ್ಲಾ ಪೊಲೀಸರನ್ನು ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಸವರಾಜ ಪಾಟೀಲ್ ಸೇಡಂ ಶ್ಲಾಘಿಸಿದ್ದಾರೆ.
(ಇನ್ಫೋ ವಾರ್ತೆ)
ವಾರ್ತಾ ಸಂಚಯ
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications