ಕನ್ನಡ ತಂತ್ರಜ್ಞಾನದ ಭಾಷೆಯಾಗಬೇಕು : ಚಿದಾನಂದಮೂರ್ತಿ
ಚಿಕ್ಕಮಗಳೂರು : ಶ್ರೀಮಂತವಾದ ಕನ್ನಡ ಭಾಷೆ ವಿಜ್ಞಾನ ಹಾಗೂ ತಂತ್ರಜ್ಞಾನದ ಭಾಷೆಯಾಗಿ ಬೆಳೆಯಬೇಕು. ಈ ನಿಟ್ಟಿನಲ್ಲಿ ಕರ್ನಾಟಕ ಸರಕಾರ ಗಂಭೀರವಾಗಿ ಚಿಂತಿಸಬೇಕು ಎಂದು ಕನ್ನಡ ಶಕ್ತಿಕೇಂದ್ರದ ಕಾರ್ಯಾಧ್ಯಕ್ಷ ಡಾ. ಎಂ. ಚಿದಾನಂದಮೂರ್ತಿ ಹೇಳಿದ್ದಾರೆ.
ಇಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದ ಚಿ.ಮೂ. ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಗಳಿಸಿರುವ ಕನ್ನಡ ಭಾಷೆ ಸಾಹಿತ್ಯ ಕ್ಷೇತ್ರದಲ್ಲಿ ಅಗ್ರಸ್ಥಾನದಲ್ಲಿದೆ. ಕಂಪ್ಯೂಟರ್ ಅನಿವಾರ್ಯ ಹಾಗೂ ಅತ್ಯಗತ್ಯವಾಗಿರುವ ಇಂದಿನ ಆಧುನಿಕ ಯುಗದಲ್ಲಿ ಕನ್ನಡ ಭಾಷೆ ವಿಜ್ಞಾನ ಹಾಗೂ ತಂತ್ರಜ್ಞಾನ ಭಾಷೆಯಾಗಿ ಹೊರಹೊಮ್ಮಿದಾಗ ಮಾತ್ರ ಅದರ ಬೆಳವಣಿಗೆ ಸಾಧ್ಯ ಎಂದರು.
ಕೃತಿ ಬಿಡುಗಡೆ : ನಾಗರಿಕತೆಯಲ್ಲಿ ಭಾಷೆಯ ಅಧ್ಯಯನ ಪ್ರಮುಖ ಪಾತ್ರ ವಹಿಸುತ್ತದೆ. ಇಂದು ಸಂಪರ್ಕ ಸಂವಹನದಲ್ಲಿ ಅಂತರ್ಜಾಲ ಅತ್ಯಂತ ಮಹತ್ವದ್ದಾಗಿದೆ, ಈ ಆಧುನಿಕ ಆವಿಷ್ಕಾರಗಳಿಗೆ ತಕ್ಕಂತೆ ಕನ್ನಡ ಭಾಷೆಯ ಬೆಳವಣಿಗೆಯೂ ಆಗಬೇಕು. ತಂತ್ರಜ್ಞಾನದ ಭಾಷೆಯಾಗಿ ಏಕರೂಪದಿಂದ ಕನ್ನಡ ಹೊರಹೊಮ್ಮಬೇಕು ಎಂದು ಅವರು ಹೇಳಿದರು.
ಡಾ. ಎಂ.ಪಿ. ಮಂಜಪ್ಪ ಶೆಟ್ಟಿ ಮಸಗಲಿ ಅವರ ಮಲೆನಾಡು ಜನಪದ ಲೋಕ ಕೃತಿ ಬಿಡುಗಡೆ ಮಾಡಿದ ಅವರು, ಜಾನಪದ ಎಂದರೆ, ಹಾಡು, ಕಥೆ, ಭಾಷೆ ಅಷ್ಟೇ ಅಲ್ಲ. ಅದರ ಹಿಂದೆ ಒಂದು ಬದುಕಿನ ರೀತಿ ಇದೆ. ನೀತಿಯಾಂದನ್ನು ಜೀವಂತವಾಗಿಡಲು ಜಾನಪದ ಒಂದು ಸಾಧನವಾಗಿದೆ ಎಂದರು.
ಲಯನ್ಸ್ ಸಂಸ್ಥೆ ರೋಟರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ. ಚಿದಾನಂದ ಮೂರ್ತಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾಧಿಕಾರಿ ಕೆ.ಎಚ್. ಗೋಪಾಲಕೃಷ್ಣ ಗೌಡ, ಜಿಲ್ಲಾ ಶಕ್ತಿ ಕೇಂದ್ರದ ಅಧ್ಯಕ್ಷ ಕೃಷ್ಣೇಗೌಡ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
(ಹಾಸನ ಪ್ರತಿನಿಧಿಯಿಂದ)
ಮುಖಪುಟ / ಇವತ್ತು... ಈ ಹೊತ್ತು...
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications