ಹೆಚ್. ನರಸಿಂಹಯ್ಯನವರಿಗೆ ಬಸವಶ್ರೀ, ಗುಂಜಾಳರಿಗೆ ಸಾಹಿತ್ಯಶ್ರೀ
ಬೆಂಗಳೂರು : ಜನಪ್ರಿಯ ಶಿಕ್ಷಣ ತಜ್ಞ ಡಾ. ಹೆಚ್. ನರಸಿಂಹಯ್ಯ ಹಾಗೂ ಜನಪ್ರಿಯ ಗ್ರಂಥಪಾಲಕ ಡಾ.ಎಸ್.ಆರ್. ಗುಂಜಾಳ್ ಅವರು, ನಗರದ ಬಸವ ವೇದಿಕೆ ನೀಡುವ ಬಸವಶ್ರೀ ಹಾಗೂ ಸಾಹಿತ್ಯ ಶ್ರೀ ಪ್ರಶಸ್ತಿಗಳಿಗೆ ಕ್ರಮವಾಗಿ ಆಯ್ಕೆಯಾಗಿದ್ದಾರೆ.
ಏ. 26 ರ ಗುರುವಾರ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯುವ ಬಸವ ಜಯಂತಿ ಕಾರ್ಯಕ್ರಮದಲ್ಲಿ ಇಬ್ಬರು ಗಣ್ಯರಿಗೂ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಗುವುದು. ಸಿದ್ಧಗಂಗೆ ಮಠಾಧೀಶ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ ಉಪಸ್ಥಿತಿಯಲ್ಲಿ ನಡೆಯುವ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಉದ್ಘಾಟಿಸುವರು. ಈ ವಿಷಯವನ್ನು ಬಸವ ವೇದಿಕೆಯ ಕಾರ್ಯಾಧ್ಯಕ್ಷ ಸಿ. ಸೋಮಶೇಖರ್ ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕೃಷ್ಣ ಅವರು ನರಸಿಂಹಯ್ಯನವರಿಗೆ ಬಸವ ಶ್ರೀ ಪ್ರಶಸ್ತಿಯನ್ನು ಹಾಗೂ ಸಂಸ್ಕೃತಿ ಖಾತೆ ಸಚಿವೆ ರಾಣಿ ಸತೀಶ್ ಸಾಹಿತ್ಯ ಶ್ರೀ ಪ್ರಶಸ್ತಿಯನ್ನು ಗುಂಜಾಳರಿಗೆ ಪ್ರದಾನ ಮಾಡುವರು. ಇದೇ ಸಂದರ್ಭದಲ್ಲಿ ಸಹಕಾರ ಸಚಿವ ಡಿ.ಕೆ. ಶಿವಕುಮಾರ್ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಧಾನ ಪರಿಷತ್ ಸದಸ್ಯ ಎಂ.ವಿ. ರಾಜಶೇಖರನ್ ವಹಿಸುವರು.
ಎತ್ತರದ ಸಾಧನೆಯ ಎತ್ತರದ ವ್ಯಕ್ತಿಗಳು
ನರಸಿಂಹಯ್ಯ ಹಾಗೂ ಗುಂಜಾಳ್ ತಂತಮ್ಮ ಕ್ಷೇತ್ರಗಳಲ್ಲಿ ಎತ್ತರದ ಸಾಧನೆಗಳನ್ನು ಮಾಡಿದ ಮಹಾನುಭಾವರು. ಶಿಕ್ಷಣ ಕ್ಷೇತ್ರದಲ್ಲಿ ನಿಷ್ಠುರ ನಿಲುವು ಹಾಗೂ ಸಮಾಜ- ಸಂಸ್ಕೃತಿ ಮುಖಿ ಒಲವುಗಳಿಂದ ನರಸಿಂಹಯ್ಯ ಪ್ರಸಿದ್ಧರು. ಸಾಯಿಬಾಬಾ ಅವರ ಪವಾಡಕ್ಕೆ ಸವಾಲೊಡ್ಡಿದ ಅವರ ವೈಚಾರಿಕತೆಯೂ ಮನೆ ಮಾತಾಗಿದೆ. ಅಪ್ಪಟ ಗಾಂಧಿವಾದಿಯೂ ಆದ ಪ್ರೀತಿಯ ಮೇಷ್ಟ್ರು ಹೆಚ್ಚೆನ್ ನಮ್ಮ ನಡುವಿನ ಅಪರೂಪದ ವ್ಯಕ್ತಿಗಳು.
ಡಾ. ಎಸ್.ಆರ್. ಗುಂಜಾಳ್ ಕರ್ನಾಟಕ ಕಂಡ ಅತ್ಯಂತ ದಕ್ಷ ಗ್ರಂಥಪಾಲಕರಲ್ಲೊಬ್ಬರು. ಪುಸ್ತಕಗಳು ಇರುವುದು ಓದುವುದಕ್ಕಾಗಿ ಅನ್ನುವ ಭಾರತೀಯ ಗ್ರಂಥಾಲಯ ಪಿತಾಮಹ ಡಾ.ಎಸ್. ಆರ್. ರಂಗನಾಥನ್ರ ತತ್ವವನ್ನು ಸಾಕಾರಕ್ಕೆ ತಂದ ಕೆಲವೇ ವ್ಯಕ್ತಿಗಳಲ್ಲಿ ಗುಂಜಾಳ್ ಪ್ರಮುಖರು. ಪುಸ್ತಕಪ್ರೀತಿ, ಕಾಯಕಕ್ಕೆ ಸಂಬಂಧಿಸಿದಂತೆ ಗುಂಜಾಳರು ಕೆಲವು ಮಹತ್ವದ ಕೃತಿಗಳನ್ನು ರಚಿಸಿದ್ದಾರೆ. ಶರಣ ಸಾಹಿತ್ಯದಲ್ಲೂ ಅವರ ಕೃಷಿಯನ್ನು ಗುರ್ತಿಸಬಹುದು.
(ಇನ್ಫೋ ವಾರ್ತೆ)
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications