ಸರ್ಕಾರ- ಬಿಸಿಸಿಐ ಟಂಗಾಟುಂಗಿಯಲ್ಲಿಕ್ರಿಕೆಟ್ ಚರಿಷ್ಮಾಗೆ ಕುತ್ತು
ನವದೆಹಲಿ : ಪಾಕಿಸ್ತಾನದೊಟ್ಟಿಗೆ ಕ್ರಿಕೆಟ್ ಆಡಬೇಕೆ, ಬೇಡವೇ ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟ ನಿಯಮಾವಳಿಗಳನ್ನು ಹೇರುವವರೆಗೆ ಭಾರತ ಕ್ರಿಕೆಟ್ ತಂಡ ಏಷ್ಯಾ ಕಪ್, ಐಸಿಸಿ ನಾಕ್ಔಟ್ ಮತ್ತು ವಿಶ್ವಕಪ್ನಲ್ಲಿ ಆಡುವುದಿಲ್ಲ !
ಮಂಗಳವಾರ ಸ್ವಾಯತ್ತ ಸಂಸ್ಥೆ ಬಿಸಿಸಿಐ ಈ ಗಂಭೀರ ನಿರ್ಣಯ ಕೈಗೊಂಡಿದೆ. ಮಂಡಳಿ ಅಧ್ಯಕ್ಷ ಎ.ಸಿ.ಮುತ್ತಯ್ಯ ಸುದ್ದಿಗೊಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಟೊರಾಂಟೋ, ಸಿಂಗಪೂರ್ ಹಾಗೂ ಶಾರ್ಜಾದಂಥ ತಟಸ್ಥ ಜಾಗೆಗಳಲ್ಲಿ ಕನಿಷ್ಠ 3 ವರ್ಷಗಳ ಕಾಲ ಭಾರತ ಕ್ರಿಕೆಟ್ ಆಡುವುದಿಲ್ಲ ಎಂದು ಸರ್ಕಾರ ಈಗಾಗಲೇ ಹೇಳಿದೆ. ಆದರೆ ಮುಂದೆ ಪಾಕಿಸ್ತಾನ ಭಾಗವಹಿಸಬಹುದಾದ ಕೆಲವು ಮಹತ್ವದ ಟೂರ್ನಿಗಳಲ್ಲಿ ಭಾರತ ಆಡಬೇಕೆ, ಬೇಡವೇ ಎಂಬ ಬಗ್ಗೆ ಸರ್ಕಾರ ಏನೂ ಹೇಳಿಲ್ಲ. ಹೀಗಾಗಿ ಭಾರತ ಇನ್ನು ಮುಂದೆ ಟೆಸ್ಟ್ ಆಡುವ ದೇಶಗಳೊಂದಿಗೆ ಪರಸ್ಪರ ಸರಣಿ ಅಥವಾ ತ್ರಿಕೋನ ಸರಣಿ (ಪಾಕಿಸ್ತಾನ ತಂಡ ಆಡದೇ ಇರುವಂಥವು) ಗಳಲ್ಲಿ ಮಾತ್ರ ಆಡಲಿದೆ ಎಂದು ಮುತ್ತಯ್ಯ ಕಡ್ಡಿ ಮುರಿದಂತೆ ಹೇಳಿದರು.
ಐಸಿಸಿ ನಾಕ್ಔಟ್ ಬರುವ ವರ್ಷ ಹಾಗೂ ವಿಶ್ವ ಕಪ್ 2003ರಲ್ಲಿ ನಡೆಯಲಿದೆ. ಸರ್ಕಾರ , ಬಿಸಿಸಿಐನ ಈ ನಿರ್ಣಯಕ್ಕೆ ಕ್ಷಿಪ್ರವಾಗಿ ಉತ್ತರ ಕೊಡದಿದ್ದಲ್ಲಿ ಭಾರತದಲ್ಲಿ ಕ್ರಿಕೆಟ್ ತನ್ನ ಚರಿಷ್ಮಾ ಕಳಕೊಳ್ಳುವ ಭಯವಿದೆ.
(ಇನ್ಫೋ ವಾರ್ತೆ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications